ಬೆಂಗಳೂರು, ಫೆಬ್ರವರಿ 11: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಬೇಲ್ ಅರ್ಜಿ ಎರಡು ಬಾರಿ ರದ್ದಾದ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶಕ್ಕೆ ತೆರಳುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಭೈರತಿ ಬಸವರಾಜ್ ಸ್ವತಃ ಶರಣಾದರೆ ಒಳ್ಳೆಯದು. ಇಲ್ಲವಾದರೆ ಪೊಲೀಸರು ಅವರನ್ನು ಪತ್ತೆ ಹಚ್ಚಿ ಬಂಧಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.