‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್ – Kannada News | R Ashoka Calls Egg Throwing Incident Targeting BJP Members a Pre Planned Act

ಬೆಂಗಳೂರು, ಜುಲೈ 22: ‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪಾಕ್ ಏಜೆಂಟರು ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಖಂಡಿಸಿ ಪಾದಯಾತ್ರೆ ಮೂಲಕ ಕಮಿಷನರ್​ ಕಚೇರಿಗೆ ಹೋಗುತ್ತೇವೆ. 15ಕ್ಕೂ ಹೆಚ್ಚು ಶಾಸಕರು ಮತ್ತು ಎಂಎಲ್ಸಿಗಳಿದ್ದರೂ ರಕ್ಷಣೆ ಇಲ್ಲವಾದರೆ ಸಾಮಾನ್ಯ ಜನರ ಗತಿಯೇನು? ಗೂಂಡಾ ಕಾಯ್ದೆಯಡಿ ಈ ಗೂಂಡಾಗಳ ಬಂಧನ ಆಗಬೇಕು. ಗೂಂಡಾ ಸಿಎಂ, ಗೂಂಡಾ ಸರ್ಕಾರ ಲಾಂಗ್, ಚಾಕು, ಮೊಟ್ಟೆ ತಂದಿದ್ದಾರೆ. ಬಾಂಬುಗಳೂ ತಂದಿರಬೇಕು. ಕಾಂಗ್ರೆಸ್ ಕಚೇರಿಯಲ್ಲಿ ಬಾಂಬುಗಳಿರಬಹುದು. ಕೆಪಿಸಿಸಿ ಕಚೇರಿ ಮೇಲೆ ರೈಡ್​ ಮಾಡಿ ಪೊಲೀಸರು ತನಿಖೆ ಮಾಡಲಿ’ ಎಂದು ಆರ್​. ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *