ಬಿಡದಿ ಟೌನ್​​​ಶಿಪ್ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ – Kannada News | BY Vijayendra Clarifies on His Conversation With Madhu Bangarappa about Bidadi Township Row And JDS

ಬೆಂಗಳೂರು, (ಆಗಸ್ಟ್ 10): ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಒಮ್ಮತ ಇದೆ ಎಂದು ಬಹಿರಂಗವಾಗಿ ಹೇಳಲಾಗುತ್ತಿದ್ದರೂ, ಆಂತರಿಕವಾಗಿ ಗೊಂದಲ ಇದೆ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬಿಡದಿ ಟೌನ್ ಶಿಪ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಸಚಿವ ಮಧು ಬಂಗಾರಪ್ಪ ನಡುವಿನ ಪಿಸು ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಅತಿವೃಷ್ಠಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಗೂ ಮುನ್ನ ಸಚಿವ ಮಧು ಬಂಗಾರಪ್ಪ ಹಾಗೂ ವಿಜಯೇಂದ್ರ ನಡುವೆ ನಡೆದ ಮಾತುಕತೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಡದಿ ಟೌನ್ ಶಿಪ್ ಹೋರಾಟದ ವಿಚಾರವಾಗಿ ಉಭಯ ನಾಯಕರು ಪಿಸು ದನಿಯಲ್ಲಿ ಮಾತುಕತೆ ನಡೆಸಿದ್ದಾರೆ. ಹೋರಾಟ ಗಂಭೀರ ಸ್ವರೂಪದಲ್ಲಿಲ್ಲ ಎಂಬ ವಿಚಾರವನ್ನು ಮಧು ಬಂಗಾರಪ್ಪ ಅವರಲ್ಲಿ ವಿಜಯೇಂದ್ರ ಹಂಚಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಡಿಯೋ ಫುಲ್ ವೈರಲ್ ಅಗುತ್ತಿದ್ದಂತೆಯೇ ಸ್ವತಃ ವಿಜಯೇಂದ್ರ ಸ್ಪಷ್ಟನೆ ನೀಡಿ ತೇಪೆ ಹಚ್ಚಲು ಮುಂದಾಗಿದೆ. ಹಾಗಾದ್ರೆ, ವಿಜಯೇಂದ್ರ ಸ್ಪಷ್ಟನೆಯಲ್ಲಿ ಏನಿದೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *