ಬಿಡದಿ ಟೌನ್​ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು! – Kannada News | HD Deve Gowda Hits Back at Congress Over Bidadi Township Protest ‘Repentance Yatra’ Remark

ರಾಮನಗರ, ಆಗಸ್ಟ್ 10: ಕರ್ನಾಟಕ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯ ಎರಡನೇ ದಿನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿ ಕಾಂಗ್ರೆಸ್​​ಗೆ ಟಾಂಗ್ ನೀಡಿದರು. ‘ಟಿವಿ9’ ಪ್ರತಿನಿಧಿ ಜತೆ ಮಾತನಾಡಿದ ಅವರು, ಜೆಡಿಎಸ್ ಪಾದಯಾತ್ರೆಯನ್ನು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು. ಕಾಂಗ್ರೆಸ್ ಸರ್ಕಾರದ ಈ ನಡವಳಿಕೆಯಿಂದ ಮುಂಬರುವ ದಿನಗಳಲ್ಲಿ ಯಾರಿಗೆ ಹಾನಿಯಾಗಲಿದೆ ಎಂಬುದನ್ನು ಕಾಲವೇ ಉತ್ತರಿಸಲಿದೆ. ತಾವು ರೈತನ ಮಗನಾಗಿ ಹುಟ್ಟಿದ್ದು, ತಮ್ಮ ಜೀವನ ಪೂರ್ತಿ ರೈತರ ಪರವಾಗಿಯೇ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ನನ್ನ ದೇಹಕ್ಕೆ ವಯಸ್ಸಾಗಿದೆ ಆದರೆ ಬುದ್ಧಿಗಲ್ಲ. ವ್ಹೀಲ್​ಚೇರ್‌ನಲ್ಲಾದರೂ ಸರಿ, ರೈತರ ನ್ಯಾಯಕ್ಕಾಗಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *