Headlines

ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ – Kannada News | Rain hailstorms expected to lash karnataka one week during heatwave says meteorologist cs patil

ಬೆಂಗಳೂರು, (ಏಪ್ರಿಲ್ 20): ಕರ್ನಾಟಕದಲ್ಲಿ (Karnataka) ಬಿಸಿಲನ ಆರ್ಭಟ ವಿಪರೀತವಾಗಿದೆ. ಕಲ್ಯಾಣ ಕರ್ನಾಟಕದ (Kalyana Karnataka) ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ದಾಟಿದ್ದು, ಬಿಸಿಲನ ಝಳಕ್ಕೆ ಜನ ಕಂಗಾಲಾಗಿದ್ದಾರೆ. ಇನ್ನು ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ನಾನಾ ಮಾರ್ಗ ಅನುಸರಿಸುತ್ತಿದ್ದಾರೆ. ಈ ಬಿಸಿಲಿನ ಬೇಗೆಯ ನಡುವೆಯೇ ವರುಣನ (Rain) ಆಗಮನದ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ

ಬೆಂಗಳೂರಿನಲ್ಲಿಂದು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ನೋಡಿ: ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ

ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಹೆಚ್ಚು

ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದ್ದು, ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿದರೆ ಉತ್ತಮ. ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದೆ. ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಹೀಟ್​ಸ್ಟ್ರೋಕ್ ವಾರ್ಡ್ ಸ್ಥಾಪನೆ

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ರಣಬಿಸಿಲಿಗೆ ಸಿಲುಕಿ ಜನ ನರಳಾಡುವಂತಾಗಿದೆ. ತಂಪು ಪಾನಿಯ, ಎಸಿ, ಫ್ಯಾನ್​ಗಳ ಮೊರೆ ಹೋದ್ರೂ ಬಿಸಿ ತಪ್ಪದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಪ್ರತಿದಿನ 40 ಡಿಗ್ರಿ ದಾಟುತ್ತಿದೆ. ಈ ರಣಬಿಸಿಲಿಗೆ ಸಿಲುಕಿ ಜನ ನರಳಾಡುವಂತಾಗಿದ್ದು, ತಂಪು ಪಾನಿಯ, ಎಸಿ, ಫ್ಯಾನ್​ಗಳ ಮೊರೆ ಹೋದ್ರೂ ಬಿಸಿ ತಪ್ಪದಾಗಿದೆ. ಬಿಸಿಲಿನ ತಾಪಕ್ಕೆ ಜನರಲ್ಲಿ ನಿರ್ಜಲೀಕರಣ, ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ದಟ್ಟವಾಗಿರುತ್ತೆ. ಹೀಗಾಗಿ ಕೆಲ ಜಿಲ್ಲಾ ಆರೋಗ್ಯ ಇಲಾಖೆ ಆಸ್ಪತ್ರೆಯಲ್ಲಿ ಹೀಟ್​ಸ್ಟ್ರೋಕ್ ವಾರ್ಡ್ ಸ್ಥಾಪಿಸಿದೆ. ಬಿಸಿಲಿನಿಂದ ವಾಂತಿ- ಭೇದಿ ಹಾಗೂ ಜ್ವರ ಬರಬಹುದು. ಈ ಲಕ್ಷಣ ಕಾಣಿಸಿಕೊಂಡವರಿಗೆ ಈ ವಾರ್ಡ್ ತೆರೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *