ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ! – Kannada News | Chamarajanagar Wild Elephant Attacks Home Guard Car and Shop at Biligirirangana Hills Temple

ಚಾಮರಾಜನಗರ, ಜೂನ್ 23: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಟೈಗರ್ ರಿಸರ್ವ್ (BRT) ಅರಣ್ಯ ಪ್ರದೇಶದಲ್ಲಿರುವ ಸುಪ್ರಸಿದ್ಧ ಬಿಳಿಗಿರಿರಂಗನಾಥ ದೇವಾಲಯದ ಆವರಣದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ. ಇಷ್ಟು ದಿನ ಕೇವಲ ಅರಣ್ಯದ ಒಳಗಿನ ಕೆರೆಗಳ ಬಳಿಯಷ್ಟೇ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿತ್ತು. ಇದೀಗ ಒಂಟಿ ಸಲಗವೊಂದು ನೇರವಾಗಿ ದೇವಾಲಯದ ಗೋಪುರದ ಬಳಿಗೇ ಲಗ್ಗೆ ಇಟ್ಟು ಹಾನಿ ಮಾಡಿದೆ. ರಾತ್ರಿ ಕರ್ತವ್ಯ ಮುಗಿಸಿ ಹೋಮ್ ಗಾರ್ಡ್ ರಂಗನಾಥ್ ತಮ್ಮ ಕಾರನ್ನು ದೇವಾಲಯದ ಆವರಣದಲ್ಲೇ ಪಾರ್ಕ್ ಮಾಡಿದ್ದರು. ಮುಂಜಾನೆ ಬಂದು ನೋಡಿದಾಗ ಕಾಡಾನೆಯು ಕಾರಿನ ವೈಪರ್ ಕಿತ್ತುಹಾಕಿ, ದಂತದಿಂದ ತಿವಿದು ಕಾರನ್ನು ಜಖಂ ಮಾಡಿರುವುದು ಬೆಳಕಿಗೆ ಬಂದಿದೆ.

ಅಷ್ಟೇ ಅಲ್ಲದೆ, ಅಲ್ಲೇ ಪಕ್ಕದಲ್ಲಿದ್ದ ಒಂದು ಪೆಟ್ಟಿ ಅಂಗಡಿಯ ಶೆಟರ್ ಅನ್ನು ಸಹ ಆನೆ ಜಖಂ ಮಾಡಿದೆ. ಇತಿಹಾಸ ಪ್ರಸಿದ್ಧ ರಂಗನಾಥನ ಸನ್ನಿಧಿಗೆ ಆನೆ ನುಗ್ಗಿರುವ ಕಾರಣ ಭಕ್ತರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದು, ಅರಣ್ಯ ಇಲಾಖೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *