Headlines

ಬಿಹಾರದಲ್ಲಿ ಫೇಸ್‌ಬುಕ್ ಲೈವ್‌ನಲ್ಲಿ ಶರಣಾಗುವುದಾಗಿ ಹೇಳಿದ್ದ ರೌಡಿ ಎನ್‌ಕೌಂಟರ್‌ಗೆ ಬಲಿ! – Kannada News | Bihar rowdy Who Offered To Surrender In Facebook Live Dies After Police Encounter

ಪಾಟ್ನಾ, ಜೂನ್ 18: ಬಿಹಾರದಲ್ಲಿ ಅಪರಾಧಿಯೊಬ್ಬ ಫೇಸ್​​ಬುಕ್ ಲೈವ್ ಬಂದು ತಾನು ಪೊಲೀಸರ ಮುಂದೆ ಶರಣಾಗುವುದಾಗಿ ನಾಟಕವಾಡಿದ್ದ. ಆ ಲೈವ್ ಪ್ರಸಾರ ಮುಗಿಯುವಷ್ಟರಲ್ಲಿ ಪೊಲೀಸರು ಆತನನ್ನು ಸುತ್ತುವರೆದಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಎನ್​ಕೌಂಟರ್ ನಡೆಸಲಾಗಿದೆ. ವರದಿಗಳ ಪ್ರಕಾರ, ಮೃತನಾದ ವ್ಯಕ್ತಿ ಬಿಹಾರದ ಪೊಲೀಸರಿಗೆ ಹಲವು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ರೌಡಿಯಾಗಿದ್ದ. ಪೊಲೀಸರು ತನ್ನನ್ನು ಹಿಡಿಯಲು ಜಾಲ ಬೀಸಿರುವುದನ್ನು ಅರಿತ ಈತ, ಸಾರ್ವಜನಿಕರ ಅನುಕಂಪ ಗಿಟ್ಟಿಸಲು ಮತ್ತು ಪೊಲೀಸರು ತನ್ನನ್ನು ಎನ್‌ಕೌಂಟರ್ (Police Encounter) ಮಾಡುವುದನ್ನು ತಪ್ಪಿಸಲು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ದಿಢೀರ್ ಲೈವ್ ಬಂದಿದ್ದ.

ಲೈವ್ ವಿಡಿಯೋದಲ್ಲಿ ಮಾತನಾಡಿದ್ದ ಆತ, “ನಾನು ಪೊಲೀಸರಿಗೆ ಶರಣಾಗಲು ಸಿದ್ಧನಿದ್ದೇನೆ. ಕಾನೂನಿನ ಮೇಲೆ ನನಗೆ ಗೌರವವಿದೆ, ನನ್ನನ್ನು ಎನ್‌ಕೌಂಟರ್ ಮಾಡಬೇಡಿ” ಎಂದು ಮನವಿ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಇದನ್ನೂ ಓದಿ: ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಎನ್​ಕೌಂಟರ್​ನಲ್ಲಿ ಸಾವು

ಫೇಸ್‌ಬುಕ್ ಲೈವ್‌ನಲ್ಲಿ ಆತ ಇದ್ದ ಜಾಗದ ಸುಳಿವು ಪತ್ತೆಹಚ್ಚಿದ ಪೊಲೀಸರ ವಿಶೇಷ ತಂಡ ತಡರಾತ್ರಿ ಆತ ಅಡಗಿದ್ದ ಸ್ಥಳದ ಮೇಲೆ ಜಂಟಿ ದಾಳಿ ನಡೆಸಿತು. ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದು ಆತನಿಗೆ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಮತ್ತೊಮ್ಮೆ ಸೂಚಿಸಿದರು. ಆದರೆ, ಫೇಸ್‌ಬುಕ್ ಲೈವ್‌ನಲ್ಲಿ ಶಾಂತಿ ಮಂತ್ರ ಪಠಿಸಿದ್ದ ಅಪರಾಧಿ, ಪೊಲೀಸರನ್ನು ನೋಡುತ್ತಿದ್ದಂತೆ ದಿಢೀರನೆ ಅವರ ಮೇಲೆಯೇ ಗುಂಡಿನ ದಾಳಿ ಆರಂಭಿಸಿದ್ದಾನೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದ್ದಾರೆ. ಈ ಭೀಕರ ಗುಂಡಿನ ಚಕಮಕಿಯಲ್ಲಿ ಅಪರಾಧಿಗೆ ತೀವ್ರವಾಗಿ ಗುಂಡು ತಗುಲಿದೆ.

ಗುಂಡೇಟಿನಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಆತನನ್ನು ಪೊಲೀಸರು ತಕ್ಷಣವೇ ಹತ್ತಿರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನಾ ಸ್ಥಳದಿಂದ ಕೆಲವು ಕಾನೂನುಬಾಹಿರ ಶಸ್ತ್ರಾಸ್ತ್ರಗಳು ಮತ್ತು ಜೀವಂತ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು?

ಒಂದೆಡೆ ಅಪರಾಧಿ ತಾನಾಗಿಯೇ ಶರಣಾಗಲು ಬಯಸಿದ್ದರೂ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಮತ್ತು ಕೆಲವು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸುತ್ತಿದ್ದರೆ, ಮತ್ತೊಂದೆಡೆ ಪೊಲೀಸರು “ಆತ ಶರಣಾಗತಿಯ ನಾಟಕವಾಡಿ ನಮ್ಮ ಮೇಲೆಯೇ ಮೊದಲು ದಾಳಿ ನಡೆಸಿದ್ದರಿಂದ ಅನಿವಾರ್ಯವಾಗಿ ಪ್ರತಿದಾಳಿ ನಡೆಸಬೇಕಾಯಿತು” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *