ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು? – Kannada News | Samrat Choudharys first reaction after being selected as Bihar Chief Minister

ಪಾಟ್ನಾ, ಏಪ್ರಿಲ್ 14: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ (ಏಪ್ರಿಲ್ 15) ಬೆಳಿಗ್ಗೆ 11 ಗಂಟೆಗೆ ಅವರು ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ನಡೆದ ಶಾಸಕಾಂಗ ಸಭೆಯಲ್ಲಿ ಘೋಷಣೆಯಾದ ಕೂಡಲೇ ಸಾಮ್ರಾಟ್ ಚೌಧರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮೇಲೆ ನಂಬಿಕೆ ಇರಿಸಿ ಬಿಹಾರ ಶಾಸಕಾಂಗ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್​ಗೆ ಸಾಮ್ರಾಟ್ ಚೌಧರಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

“ನನ್ನ ಮೇಲೆ ನಂಬಿಕೆ ಇಟ್ಟು ಬಿಜೆಪಿ ಬಿಹಾರ ಶಾಸಕಾಂಗ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್​​ಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನನಗೆ, ಇದು ಕೇವಲ ಒಂದು ಹುದ್ದೆಯಲ್ಲ. ಇದು ಬಿಹಾರದ ಜನರಿಗೆ ಸೇವೆ ಸಲ್ಲಿಸಲು, ಅವರ ನಂಬಿಕೆ ಮತ್ತು ಕನಸುಗಳನ್ನು ನನಸಾಗಿಸಲು ಒಂದು ಪವಿತ್ರ ಅವಕಾಶ. ಪ್ರತಿಯೊಬ್ಬ ನಾಗರಿಕನ ನಿರೀಕ್ಷೆಗಳನ್ನು ಸಂಪೂರ್ಣ ಸಮಗ್ರತೆ, ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ಪೂರೈಸಲು ನಾನು ಪ್ರತಿಜ್ಞೆ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಮಾರ್ಗದರ್ಶನದಲ್ಲಿ ಬಿಹಾರವನ್ನು ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಸಮೃದ್ಧಿಯ ಹೊಸ ಆಯಾಮಗಳತ್ತ ಕೊಂಡೊಯ್ಯಲು ನಾನು ನಿರಂತರವಾಗಿ ಬದ್ಧನಾಗಿರುತ್ತೇನೆ. ನಿಮ್ಮ ಪ್ರೀತಿ, ಆಶೀರ್ವಾದ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ. ಜೈ ಬಿಹಾರ, ಜೈ ಭಾರತ್!” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *