Headlines

ಬೀದಿಬದಿ ವ್ಯಾಪಾರಿಗಳು ಬಡವರು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ – Kannada News | Ramalingareddy Advocates for Hawkers Zones to Resolve Bengaluru Footpath Issues

ಬೆಂಗಳೂರು, ಜು.17: ರಾಜಧಾನಿಯಲ್ಲಿ ಫುಟ್‌ಪಾತ್ ಒತ್ತುವರಿ ಸಮಸ್ಯೆ ಮತ್ತು ಬೀದಿಬದಿ ವ್ಯಾಪಾರಿಗಳ ಭವಿಷ್ಯದ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ. ಫುಟ್‌ಪಾತ್‌ಗಳು ಸಾರ್ವಜನಿಕರ ಓಡಾಟಕ್ಕಾಗಿ ಇವೆ. ಅಲ್ಲಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾರೂ ಆಕ್ಷೇಪಿಸುವುದಿಲ್ಲ, ಆದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು. ಹಾಕರ್ಸ್ ಝೋನ್ ವ್ಯವಸ್ಥೆ ಪ್ರಪಂಚದಾದ್ಯಂತ ಇದೆ. ಬೆಂಗಳೂರಿನಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಬೀದಿಬದಿ ವ್ಯಾಪಾರಿಗಳು ಬಡವರಲ್ಲಿ ಬಡವರು. ಅವರಿಗೆ ಸೂಕ್ತ ಹಾಕರ್ಸ್ ಝೋನ್ ಒದಗಿಸಿ, ಪಾದಚಾರಿಗಳಿಗೆ ಫುಟ್‌ಪಾತ್‌ಗಳನ್ನು ಬಿಟ್ಟುಕೊಡುವುದು ಸೂಕ್ತ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿಯೂ ಫುಟ್‌ಪಾತ್ ವ್ಯಾಪಾರಿಗಳಿಗೆ 20,000 ರೂ. ಒನ್ ಟೈಮ್ ನೆರವು ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ರಾಮಲಿಂಗಾರೆಡ್ಡಿ ನೆನಪಿಸಿದರು. ರಾಹುಲ್ ಗಾಂಧಿಯವರು ಕೂಡ ಇವರೊಂದಿಗೆ ಚರ್ಚೆ ನಡೆಸಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ತಿದ್ದುಪಡಿ ತರಲಾಗಿತ್ತು ಎಂದು ಸಚಿವರು ವಿವರಿಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ, ವ್ಯಾಪಾರಿಗಳಿಗೆ ಹಾಕರ್ಸ್ ಝೋನ್ ವ್ಯವಸ್ಥೆ ಕಲ್ಪಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *