ಬೆಂಗಳೂರು, ಆಗಸ್ಟ್ 04: ಜಿಬಿಎ ಮುಖ್ಯ ಕಚೇರಿಯಲ್ಲಿ ಅಧಿಕಾರಿಗಳ ಜತೆ ಕೃಷ್ಣ ಭೈರೇಗೌಡ ಸಭೆ ನಡೆಸಿದ್ದು, ನಗರದಲ್ಲಿ ಬೀದಿ ದೀಪ ಅಳವಡಿಸದ ಹಿನ್ನೆಲೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಗರಂ ಆದ ಪ್ರಸಂಗ ನಡೆದಿದೆ. ಸಭೆಗೆ ಸಿದ್ಧತೆ ಇಲ್ಲದೆ ಬಂದಿದ್ದೀರೆಂದು ಅಧಿಕಾರಿಗಳಿಗೆ ಸಚಿವರು ತರಾಟೆಗೆ ಪಡೆದಿದ್ದು, ಬೇಸಿಕ್ ಡೇಟಾ ಇಲ್ಲ, ಪ್ರಶ್ನೆಗೆ ಉತ್ತರ ಇಲ್ಲ, ಸಿದ್ಧತೆಯೊಂದಿಗೆ ಬರಲಾಗಲ್ವಾ? ಡೇಟಾ ಇಲ್ಲದೆ ಬಂದಿದ್ದೀರಿ, ಸರ್ಕಾರಿ ಕೆಲಸ ಅಂದ್ರೆ ಕೈಬೀಸಿ ಬಂದು ಹೋಗೋದಲ್ಲ ಎಂದು ಇಂಜಿನಿಯರ್ಗಳ ನಿರ್ಲಕ್ಷ್ಯಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿ ದೀಪ ಸಮಸ್ಯೆ ಬಗೆಹರಿಸುವಂತೆ ಇದೇ ವೇಳೆ ಅಧಿಕಾರಿಗಳಿಗೆ ಅವರು ಖಡಕ್ ಸೂಚನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.