
ಬೆಂಗಳೂರು, ಮಾ.14: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಶಾಲೆಯೊಂದರ ಅಮಾನವೀಯ ವರ್ತನೆ ಈಗ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ ಎರಡು ನಿಮಿಷ ತಡವಾಗಿ ಶಾಲೆಗೆ ಬಂದಿದ್ದಕ್ಕಾಗಿ ಆರನೇ ವರ್ಷದ ಪುಟ್ಟ ಮಗುವನ್ನು ಸುಮಾರು ಎರಡು ಗಂಟೆಗಳ ಕಾಲ ಸುಡುವ ಬಿಸಿಲಿನಲ್ಲಿ ನಿಲ್ಲಿಸುವ ಮೂಲಕ ಶಾಲಾ ಮಂಡಳಿ ತನ್ನ ಕ್ರೌರ್ಯ ಮೆರೆದಿದೆ. ನಗರದ ಸಂಚಾರ ದಟ್ಟಣೆಯಿಂದಾಗಿ ಮಗು ಶಾಲೆಗೆ ಕೇವಲ 2 ನಿಮಿಷ ತಡವಾಗಿ ತಲುಪಿದೆ. ಇದನ್ನೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಿದ ಶಾಲಾ ಸಿಬ್ಬಂದಿ, ಮೊದಲನೇ ತರಗತಿಯ ಮಗುವನ್ನು ಮಧ್ಯಾಹ್ನದ ಅತೀ ಹೆಚ್ಚು ತಾಪಮಾನವಿರುವ ಬಿಸಿಲಿನಲ್ಲಿ ಎರಡು ಗಂಟೆಗಳ ಕಾಲ ಮೈದಾನದಲ್ಲಿ ನಿಲ್ಲಿಸಿದ್ದಾರೆ. ಸುಡುವ ಬಿಸಿಲಿಗೆ ಮಗು ಕಂಗಾಲಾಗಿದ್ದು, ದೈಹಿಕವಾಗಿ ಅಸ್ವಸ್ಥಗೊಂಡಿದೆ. ಆರು ವರ್ಷದ ಮಗುವಿಗೆ ಇಂತಹ ಕಠಿಣ ಶಿಕ್ಷೆ ನೀಡಿರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಪ್ರಶ್ನಿಸಲು ಹೋದಾಗ, ಕ್ಷಮೆ ಕೇಳುವ ಬದಲು ಅತ್ಯಂತ ಅಹಂಕಾರದಿಂದ ವರ್ತಿಸಿದ್ದಾರೆ. “ನಮ್ಮ ಶಿಸ್ತೇ ಹೀಗೆ, ನಿಮಗೆ ಇಷ್ಟವಿಲ್ಲದಿದ್ದರೆ ಮಗುವನ್ನು ಕರೆದುಕೊಂಡು ಹೋಗಿ” ಎನ್ನುವ ರೀತಿಯಲ್ಲಿ ಬೇಜವಾಬ್ದಾರಿಯುತ ಉತ್ತರ ನೀಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಈ ಬಗ್ಗೆ @gharkekalesh ಎಂಬ ಎಕ್ಸ್ ಖಾತೆ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ