ಬೆಂಗಳೂರು, ಮೇ.5: ನಗರದ ಉತ್ತರಹಳ್ಳಿ ಬಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜಕಾಲುವೆಯ ಗ್ರಿಲ್ ಹತ್ತಿ ಭಾರಿ ಹುಚ್ಚಾಟ ನಡೆಸಿದ ಘಟನೆ ನಡೆದಿದೆ. ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉತ್ತರಹಳ್ಳಿ ಸಮೀಪದ ರಾಜಕಾಲುವೆಗೆ ಅಳವಡಿಸಲಾಗಿದ್ದ ಸುರಕ್ಷತಾ ಗ್ರಿಲ್ ಅನ್ನು ಹತ್ತಿದ ಯುವಕ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ಹಿಡಿದು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆತ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರ ವಶದಲ್ಲಿದ್ದಾನೆ. ಯುವಕ ಈ ರೀತಿ ವರ್ತಿಸಲು ಕಾರಣವೇನು ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ