ಬೆಂಗಳೂರು/ಬೆಳಗಾವಿ, (ಜುಲೈ 08): ಇದೇ ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ (Belagavi) ಆರ್ಎಸ್ಎಸ್ (RSS) ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಜನಗಣತಿ ಪ್ರಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಈ ಸಭೆಯಲ್ಲಿ ದೇಶದಾದ್ಯಂತ ಇರುವ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು, ಕಾರ್ಯಕ್ರಮ ಬೇಕಿದ್ರೆ ನಡೆಸಿಕೊಳ್ಳಲಿ. ಆದ್ರೆ, ಬೀದಿಗಿಳಿದು ಪರೇಡ್ಗೆ ಅವಕಾಶ ಇಲ್ಲ ಎಂದ ಖಡಕ್ ಆಗಿ ಹೇಳಿದ್ದಾರೆ.
ನಾನು ಗೃಹ ಸಚಿವನಾಗಿ ಇರುವ ತನಕ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯೆ ಇದೀಗ ಬೆಳಗಾವಿ ಕಾರ್ಯಕ್ರಮ ಆರಂಭವಾಗುವುದಕ್ಕೂ ಮೊದಲೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.