Headlines

ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ – Kannada News | Belagavi, Bagalkote, Mangaluru Hit by Severe Storms: Uprooted Trees, Power Cuts and Traffic Disruption

ಬೆಳಗಾವಿ, ಮೇ 13: ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ರಭಸಕ್ಕೆ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಸಂಚಾರಕ್ಕೆ ತೀವ್ರ ಅಡ್ದಿಯಾಗಿದೆ. ರಸ್ತೆಗಳ ಮೇಲೆ ಬಿದ್ದ ಮರಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಬಾಗಲಕೋಟೆಯ ಬಾದಾಮಿಯಲ್ಲೂ ಇದೇ ರೀತಿಯ ಸನ್ನಿವೇಶವಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಾಗಲಕೋಟೆ-ಬಾದಾಮಿ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಮಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಬೈಕುಗಳನ್ನು ರಸ್ತೆ ಬದಿ ನಿಲ್ಲಿಸಿ ನಡೆದುಕೊಂಡು ಹೋಗಬೇಕಾಯಿತು. ಕಾರವಾರ ಮತ್ತು ಹುಬ್ಬಳ್ಳಿಯಲ್ಲೂ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಿಂದಾದ ಹಾನಿಯು ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟುಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *