ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ: ಕಾರಣ ಇಲ್ಲಿದೆ – Kannada News | KGF Betala Temple Raid: Aghori Guruji Detained Amidst Allegations of Black Magic and Womens Harassment

ಕೋಲಾರ, ಜುಲೈ 14: ಜಿಲ್ಲೆ ಕೆಜಿಎಫ್ ತಾಲೂಕಿನ ಐವರಹಳ್ಳಿ ಗ್ರಾಮದ ಬಳಿಯಿರುವ ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರು ದಾಳಿ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದೇ ನಡೆದ ಈ ಕಾರ್ಯಾಚರಣೆಯಲ್ಲಿ ದೇವಾಲಯದ ನಿರ್ಮಾತೃ ಅಗೋರಿ ಚಂದ್ರನಾಥ್ ಗುರೂಜಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಿರ್ಮಾಣಗೊಂಡ ಈ ದೇವಾಲಯವು 108 ಅಡಿ ಎತ್ತರದ ಬೇತಾಳ ವಿಗ್ರಹದ ಮೂಲಕ ಆಂಧ್ರ ಮತ್ತು ತಮಿಳುನಾಡಿನಿಂದ ಭಕ್ತರನ್ನು ಆಕರ್ಷಿಸುತ್ತಿತ್ತು. ಆದರೆ, ಇಲ್ಲಿ ಮಾಟಮಂತ್ರ, ದೆವ್ವ ಬಿಡಿಸುವಿಕೆ, ಕುಡಿತ ಬಿಡಿಸುವ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು ಎಂಬ ಆರೋಪ ಕೇಳಿಬಂದಿತ್ತು. ವಿಶೇಷವಾಗಿ, ಮಹಿಳೆಯರಿಗೆ ದೆವ್ವ ಬಿಡಿಸುವ ನೆಪದಲ್ಲಿ ಹಿಂಸೆ ನೀಡಲಾಗುತ್ತಿತ್ತು ಎಂದು ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನೆಲೆ ಸಿಪಿಐ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *