ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೆಂಗಳೂರು, ಏಪ್ರಿಲ್​​ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್​ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ.

ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್​​ಗೆ ವಿನೋದ್ ಗಾಡಿ ಟಚ್ ಆಗಿತ್ತು. ಇದೇ ವಿಚಾರವಾಗಿ ಗಲಾಟೆ ಕೂಡ ನಡೆದಿತ್ತು. ವಿಷಯವನ್ನು ಅಲ್ಲಿಗೆ ಬಿಡದೆ ಇಂದು ಬೆಳಗ್ಗೆ ವಿಜಯ್ ಹುಡುಕಿಕೊಂಡು ಆರೋಪಿಗಳಾದ ಕಿರಣ್ ಮತ್ತು ವಿನೋದ್ ಹೋಗಿದ್ದರು. ಮನೆ ಬಳಿ ತೆರಳಿದ್ದಾಗ ವಿಜಯ್ ಸಿಗದಿದ್ದರಿಂದ ಫೋನ್ ಮಾಡಿ ಆತನನ್ನು ಮತ್ತೆ ಬಾರ್ ಬಳಿಗೆ ಕರೆಸಿಕೊಂಡಿದ್ದರು. ವಿಜಯ್​​ ಸ್ಥಳಕ್ಕೆ ಬರುತ್ತಿದ್ದಂತೆ ಗಲಾಟೆ ಶುರುಮಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ವಿಜಯ್ ಹೊಟ್ಟೆಗೆ ಚಾಕು ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಜೆ.ಸಿ.ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌; ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹಿಂದಿನಿಂದಲೂ ಇತ್ತು ದ್ವೇಷ!

ಇನ್ನು ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದ್ದು, ಬೈಕ್​​ ಟಚ್​​ ಆದ ವಿಚಾರ ಕೊಲೆಗೆ ಕೇವಲ ಪ್ರಚೋದನೆ ಮಾತ್ರ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಆರೋಪಿ ಕಿರಣ್​​ ಮತ್ತು ವಿಜಯ್​​ ನಡುವೆ ಹಿಂದಿನಿಂದಲೂ ದ್ವೇಷವಿತ್ತು. ವಿಜಯ್​​ಗೆ ಅದಾಗಲೇ ಮದುವೆಯಾಗಿದ್ದರೂ ಮಾಜಿ ಪ್ರೇಯಸಿಗೆ ಕಾಟ ನೀಡುತ್ತಿದ್ದ. ಆಕೆ ಈಗ ಕಿರಣ್​​ ಲವರ್​​ ಆಗಿದ್ದು, ಇದೇ ಕಾರಣಕ್ಕೆ ವಿಜಯ್​​ ಮೇಲೆ ಕಿರಣ್​​ಗೆ ಕೋಪ ಇತ್ತು. ಹೀಗಾಗಿ ನಿನ್ನೆ ರಾತ್ರಿಯ ಗಲಾಟೆ ನೆಪದಲ್ಲಿ ಇಂದು ಅಟ್ಟಾಡಿಸಿ ವಿಜಯ್​​ನ ಆರೋಪಿಗಳು ಕೊಲೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *