
ಪುಣೆ, ಮಾರ್ಚ್ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ.
ಕೊರೆಯುವಿಕೆಯು 80 ರಿಂದ 100 ಅಡಿ ಆಳದಲ್ಲಿರುವ ಮೆಟ್ರೋ ಸುರಂಗದಲ್ಲಿ ಸುಮಾರು ಆರು ಇಂಚು ವ್ಯಾಸದ ರಂಧ್ರವನ್ನು ಸೃಷ್ಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರೆಯುವಿಕೆಯು ಮೆಟ್ರೋ ಮಾರ್ಗದ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಮೆಟ್ರೋ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ, ಬೋರ್ವೆಲ್ ಕೊರೆಯುವಿಕೆಯನ್ನು ಸ್ಥಗಿತಗೊಳಿಸಿದ್ದಾರೆ.ಮೆಟ್ರೋ ಅಧಿಕಾರಿ ಶಾಂತನು ಗೋರಟ ಅವರು ಮಾತನಾಡಿ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 125 ಮತ್ತು 324 ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ, ಇದು ಜೀವಕ್ಕೆ ಅಪಾಯವನ್ನುಂಟುಮಾಡುವ ನಿರ್ಲಕ್ಷ್ಯದ ಕೃತ್ಯಗಳಿಗೆ ಇದು ಸಂಬಂಧಿಸಿದೆ.
ಮತ್ತಷ್ಟು ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು
ಗುತ್ತಿಗೆದಾರ ಮತ್ತು ಮನೆಮಾಲೀಕ ಇಬ್ಬರೂ ಅಲ್ಲೇ ಕೆಲಗಡೆ ಮೆಟ್ರೋ ಸುರಂಗ ಮಾರ್ಗ ಇರುವ ಬಗ್ಗೆ ಅರಿತಿದ್ದರು, ಆದರೂ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರಂಗ ಮಾರ್ಗಗಳ ಬಳಿ ಕೊರೆಯುವ ಬಗ್ಗೆ ಈಗಾಗಲೇ ಏಜೆನ್ಸಿಗಳು ಮತ್ತು ನಾಗರಿಕರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಮಹಾ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರೋ ಸುರಂಗ ಮಾರ್ಗಗಳ ಉದ್ದಕ್ಕೂ ಬೋರ್ವೆಲ್ಗಳನ್ನು ಅಗೆಯುವಾಗ ಮುನ್ನೆಚ್ಚರಿಕೆ ವಹಿಸುವಂತೆ ನಾವು ಅಂತರ್ಜಲ ಸಮೀಕ್ಷಾ ಸಂಸ್ಥೆ ಮತ್ತು ನಾಗರಿಕ ಆಡಳಿತಕ್ಕೆ ಸೂಚನೆ ನೀಡುತ್ತಿದ್ದೆವು.
ನಮಗೆ 24 ಅಡಿ ಆಳದಲ್ಲಿ ನೀರಿನ ವರತೆ ಇರುವುದು ಗೊತ್ತಾಗಿತ್ತು, ಆದರೆ ಅದು ಮೆಟ್ರೋ ಸುರಂಗ ಮಾರ್ಗವನ್ನು ಕೊರೆಯಬಹುದು ಎನ್ನುವ ಊಹೆ ನಮಗಿರಲಿಲ್ಲ. ನಾವು ಅಪರಾಧಿಗಳಲ್ಲ. ಅಧಿಕಾರಿಗಳು ನಮ್ಮೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಬೇಕಿತ್ತು ಎಂದು ಮನೆ ಮಾಲೀಕ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ