ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ! – Kannada News | “Decide if You Want to Be on Map”: Army Chief Gen Upendra Dwivedi’s Stern Warning to Terror State Pakistan

ನವದೆಹಲಿ, ಮೇ 16: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ (Army Chief) ಜನರಲ್ ಉಪೇಂದ್ರ ದ್ವಿವೇದಿ (General Upendra Dwivedi) ನೆರೆರಾಷ್ಟ್ರಕ್ಕೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಸಂಚು ರೂಪಿಸುವುದನ್ನು ಮುಂದುವರಿಸುವ ಮುನ್ನ ಜಗತ್ತಿನ ಭೂಪಟ (Geography) ಮತ್ತು ಇತಿಹಾಸದ ಭಾಗವಾಗಿ ಉಳಿಯಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಿಕೊಳ್ಳಲಿ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ಸದಾ ಸೈನಿಕರನ್ನು ಪ್ರಚೋದಿಸುವ ಹಾಗೂ ಗಡಿಯಲ್ಲಿ ಉಗ್ರರನ್ನು ನುಸುಳಿಸುವ ಪಾಕಿಸ್ತಾನದ ಕುತಂತ್ರಕ್ಕೆ ಭಾರತ ಇನ್ನು ಮುಂದೆ ಮೌನವಾಗಿ ಕೂರುವುದಿಲ್ಲ, ಬದಲಿಗೆ ಅತ್ಯಂತ ಪ್ರಖರ ಪ್ರತ್ಯುತ್ತರ ನೀಡಲಿದೆ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

(ವಿಡಿಯೋ ಕೃಪೆ: ಪಿಟಿಐ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *