ರೆವ್ ಸ್ಪೋರ್ಟ್ಸ್ ವರದಿಯ ಪ್ರಕಾರ, ಆಯ್ಕೆ ಸಮಿತಿಯು ಶುಭ್ಮನ್ ಗಿಲ್ ಅವರನ್ನು ಟಿ20 ತಂಡಕ್ಕೂ ಮರಳಿ ಕರೆತಂದು ಅವರಿಗೆ ನಾಯಕತ್ವ ವಹಿಸುವ ಬಗ್ಗೆ ಚಿಂತಿಸಲಾರಂಬಿಸಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟದವರೆಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಆಯ್ಕೆದಾರರು ಅಂತಿಮವಾಗಿ ನಿರ್ಧರಿಸಿದ್ದು, ಈ ಕ್ರೀಡಾಕೂಟ ಮುಗಿದ ಬಳಿಕ ಇವರಿಬ್ಬರಲ್ಲಿ ಒಬ್ಬರನ್ನು ಟಿ20 ತಂಡದ ಖಾಯಂ ನಾಯಕನಾಗಿ ನೇಮಿಸುವ ಇರಾದೆಯಲ್ಲಿ ಆಯ್ಕೆ ಸಮಿತಿ ಇದೆ ಎಂದು ವರದಿಯಾಗಿದೆ (PC-PTI).
