ನವದೆಹಲಿ, ಆಗಸ್ಟ್ 10: ಉತ್ತರಾಖಂಡದ ನೀತಿ ಕಣಿವೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ಪ್ರವಾಹದ (Flood) ಮಟ್ಟ ಏರಿಕೆಯಾಗಿದ್ದು, ಪ್ರಬಲ ನೀರಿನ ರಭಸಕ್ಕೆ ಸೇತುವೆಯೊಂದು ಕ್ಷಣಾರ್ಧದಲ್ಲಿ ಕೊಚ್ಚಿಹೋಗಿದೆ. ಇದರಿಂದಾಗಿ ಈ ಗಡಿ ಪ್ರದೇಶವು ಮುಖ್ಯ ನಗರದಿಂದ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡಿದೆ. ಚಮೋಲಿ ಜಿಲ್ಲೆಯಲ್ಲಿ ಕೆಸರು ಮಿಶ್ರಿತ ನೀರು ರಭಸವಾಗಿ ಹರಿದುಬಂದು ಲೋಹದ ಸೇತುವೆಗೆ ಅಪ್ಪಳಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ನೀರಿನ ತೀವ್ರತೆಗೆ ಸೇತುವೆಯು ಕೆಲವೇ ಸೆಕೆಂಡುಗಳಲ್ಲಿ ಬುಡಮೇಲಾಗಿ ನದಿಯ ದಂಡೆಯತ್ತ ಕೊಚ್ಚಿಕೊಂಡು ಹೋಗಿದೆ.
ನದಿಯ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟ್ರಕ್ ಮತ್ತು ಕಾರು (SUV) ಒಂದರ ದೃಶ್ಯವೂ ವಿಡಿಯೋದಲ್ಲಿದ್ದು, ಸೇತುವೆ ಕೊಚ್ಚಿಹೋಗುವ ಕೆಲವೇ ಕ್ಷಣಗಳ ಮೊದಲು ಎರಡೂ ವಾಹನಗಳು ಚಾಣಾಕ್ಷತನದಿಂದ ಹಿಂತಿರುಗಿ ಪ್ರಾಣಾಪಾಯದಿಂದ ಪಾರಾಗಿವೆ. ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಮುಖ್ಯ ಪಟ್ಟಣದೊಂದಿಗಿನ ರಸ್ತೆ ಸಂಪರ್ಕ ವ್ಯತ್ಯಯಗೊಂಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
