ನವದೆಹಲಿ, ಆಗಸ್ಟ್ 5: 2024ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಸ್ಥಾನದಿಂದ ಪದಚ್ಯುತಗೊಂಡ ನಂತರ ದೆಹಲಿಯಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ (Sheikh Hasina) ಇಂದು ನಡೆಸಿದ ತಮ್ಮ ಮೊದಲ ಮಾಧ್ಯಮ ಸಂವಾದದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೆಹಲಿಯಿಂದ ವರ್ಚುವಲ್ ಆಗಿ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶೇಖ್ ಹಸೀನಾ, ಭಾರತವನ್ನು ಬಾಂಗ್ಲಾದೇಶದ ದೊಡ್ಡ ಮಿತ್ರ ಎಂದು ಬಣ್ಣಿಸಿದರು. ಬಾಂಗ್ಲಾದೇಶದ ಕಷ್ಟದ ಸಮಯದಲ್ಲಿ ಭಾರತ ಯಾವಾಗಲೂ ಬಾಂಗ್ಲಾದೇಶದ ಪರವಾಗಿ ನಿಂತಿದೆ ಮತ್ತು ಮುಂದೆಯೂ ನಿಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಭಾರತವನ್ನು ಅತ್ಯಂತ ನಂಬಿಕಸ್ಥ ಮಿತ್ರ ರಾಷ್ಟ್ರ ಎಂದು ಬಣ್ಣಿಸಿದ್ದು, 1971ರ ವಿಮೋಚನಾ ಯುದ್ಧ, 1975ರ ಕಠಿಣ ಸಮಯ ಹಾಗೂ ಪ್ರಸ್ತುತ ಎದುರಾಗಿರುವ ಬಿಕ್ಕಟ್ಟು ಸೇರಿದಂತೆ ಪ್ರತಿಯೊಂದು ಸಂಕಷ್ಟದ ಸಂದರ್ಭಗಳಲ್ಲೂ ಭಾರತವು ಬಾಂಗ್ಲಾದೇಶಕ್ಕೆ ನಿರಂತರ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, ಭಾರತ ಸರ್ಕಾರವು ತಮ್ಮನ್ನು ರಾಷ್ಟ್ರದ ಮುಖ್ಯಸ್ಥೆಯಂತೆ ಅತ್ಯಂತ ಗೌರವ ಮತ್ತು ಆತ್ಮೀಯತೆಯಿಂದ ನಡೆಸಿಕೊಂಡಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
