ಚಾಮರಾಜನಗರ, ಆಗಸ್ಟ್ 12: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನಿಗೆ ವಿಶೇಷ ಪೂಜೆಗಳು ವಿಜೃಂಭಣೆಯಿಂದ ನಡೆಯುತ್ತಿವೆ. ನಿನ್ನೆಯಿಂದಲೇ ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ದೇವಸ್ಥಾನದ ಆವರಣ ಹಾಗೂ ಪ್ರಾಂಗಣವನ್ನು ವಿದ್ಯುತ್ ದೀಪಗಳಿಂದ ಅದ್ಭುತವಾಗಿ ಅಲಂಕರಿಸಲಾಗಿದೆ. ಭಕ್ತರು ಬೆಳ್ಳಿ ರಥ, ಚಿನ್ನದ ರಥೋತ್ಸವ ಸೇರಿದಂತೆ ವಿವಿಧ ಹರಕೆ ಸೇವೆಗಳನ್ನು ನೆರವೇರಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ