ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ – Kannada News | Mohandas Pai Urges CM D.K. Shivakumar to Tackle Corruption, Accelerate Bengaluru’s Development

ಬೆಂಗಳೂರು, ಜೂನ್​​ 16:  ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವಂತೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಸಲಹೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ತಮ್ಮ ಮಾರ್ಗದರ್ಶಕರಾದ ಎಸ್.ಎಂ. ಕೃಷ್ಣ ಅವರಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಕೆಲಸ ಮಾಡಿ ಬೆಂಗಳೂರಿನ ಹೆಸರನ್ನು ವಿಶ್ವ ಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿಯಬೇಕು ಎಂದವರು ಆಶಿಸಿದ್ದಾರೆ. ಭ್ರಷ್ಟಾಚಾರದಿಂದಾಗಿ ನಗರದ ರಸ್ತೆಗಳು ಹಾಳಾಗಿವೆ, ಫುಟ್‌ಪಾತ್‌ಗಳಿಲ್ಲ, ದುಡ್ಡು ತಿನ್ನುವ ಕೆಲಸ ನಡೆಯುತ್ತಿದೆ ಎಂದು ಪೈ ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *