ರಾಯಚೂರು, ಮೇ 22: ಮಂತ್ರಾಲಯದಲ್ಲಿ ಭಾರಿ ಮಳೆಯ ಅಬ್ಬರದಿಂದ ಭಕ್ತರು ತೀವ್ರ ತೊಂದರೆಗೊಳಗಾದ ಘಟನೆ ನಡೆದಿದೆ. ರಾತ್ರಿ ಮಠದ ಪ್ರಾಂಗಣದಲ್ಲಿ ಮಲಗಿದ್ದ ಭಕ್ತರು ತಡರಾತ್ರಿ ಸುರಿದ ಅನಿರೀಕ್ಷಿತ ಮಳೆಯಿಂದ ನೆನೆದು ಪರದಾಡಿದರು. ಈ ಪರಿಸ್ಥಿತಿಯಲ್ಲಿ, ರಾಯರ ಭಕ್ತರ ನೆರವಿಗೆ ಮಂತ್ರಾಲಯ ಮಠ ಧಾವಿಸಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಶ್ರೀಗಳು ತಕ್ಷಣವೇ ಭಕ್ತರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಮುಂದಾದರು. ಮಳೆಯಿಂದ ತೊಂದರೆಗೊಳಗಾದ ಭಕ್ತರನ್ನು ಅನ್ನಪೂರ್ಣೇಶ್ವರಿ ಭೋಜನಶಾಲೆ ಮತ್ತು ಕಲ್ಯಾಣ ಮಂಟಪಗಳಿಗೆ ತೆರಳುವಂತೆ ಸೂಚಿಸಲಾಯಿತು. ಖುದ್ದು ಸುಭುದೇಂದ್ರ ತೀರ್ಥ ಸ್ವಾಮೀಜಿಯೇ ಬಂದು ವ್ಯವಸ್ಥೆ ಮಾಡಿದ್ದು ಗಮನಸೆಳೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
