ಬೀದರ್, ಫೆಬ್ರವರಿ 16: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆಗೆ ಮೃತರ ಸಂಬಂಧಿ ಟಿವಿ9 ಜೊತೆಗೆ ಮಾತನಾಡಿದ್ದು, ಮಗಳ ಮದುವೆ ಸಾಲ ತೀರಿಸುವುದಕ್ಕೆ ಹಗಲು ರಾತ್ರಿ ಕಷ್ಟಪಟ್ಟು ದುಡಿಯುತ್ತಿದ್ದರು. ಸಾಲದ ಹೊರೆ ಹೆಚ್ಚಾಗಿದ್ದರಿಂದ ತಂದೆ, ಮಗ ಲಾರಿ ಹಮಾಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವೆ ಕಾರಂಜಾ ಕಾಲುವೆ (ಬೆಳ್ಳೆ ಕೆನಲ್) ಬಳಿ ಕೈ, ಕಾಲು ತೊಳೆಯುವ ವೇಳೆ ಘಟನೆ ಸಂಭವಿಸಿ ಇಬ್ಬರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
