ವಿಜಯಪುರ, ಮೇ 15: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಸಂಭವಿಸಿದೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟಿದ್ದು, ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. ಮೃತ ಗುರುನಾಥ ಬಡಿಗೇರ ತಾಯಿ ‘ಟಿವಿ9’ ಜತೆ ಮಾತನಾಡಿದ್ದು, ‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’ ಎಂದು ಕಣ್ಣೀರು ಹಾಕಿದ್ದಾರೆ.
ಏತನ್ಮಧ್ಯೆ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ಸಚಿವರು, ಮೃತರ ಕುಟುಂಬಕ್ಕೆ ದೈರ್ಯ ತುಂಬ ಕೆಲಸ ಮಾಡಲಾಗುತ್ತದೆ. ಸರ್ಕಾರದಿಂದ ಮೃತರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದರು. ಅಲ್ಲದೆ, ವೈಯುಕ್ತಿಕವಾಗಿಯೂ ನಾನೂ ಸಹಾಯ ಮಾಡುವೆ ಎಂದು ಭರವಸೆ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
