ಒಂದು ಹಿಟ್ ಕಾಂಬಿನೇಷನ್ ಸಿಕ್ಕರೆ ಸಾಕು ನಂತರದಲ್ಲಿ ಇದನ್ನೇ ಮುಂದುವರಿಸಿಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಗುತ್ತದೆ. ಹೀಗೆ ಮಾಡೋದನ್ನು ಜನರು ಕೂಡ ಇಷ್ಟಪಡುತ್ತಾರೆ. ಈಗ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧಾರ್ ಅವರು ಮತ್ತೊಮ್ಮೆ ಒಟ್ಟಿಗೆ ಬರಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಕಾದಿದ್ದಾರೆ. ಹಾಗಂತ ಈ ಸಿನಿಮಾ ಈಗಲೇ ಸೆಟ್ಟೇರುವುದಿಲ್ಲ. ಇದಕ್ಕೆ ಸಾಕಷ್ಟು ಸಮಯದ ಅಗತ್ಯವಿದೆ.
ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ಮೊದಲ ಬಾರಿಗೆ ಒಂದಾಗಿದ್ದು ‘ಧುರಂಧರ್’ ಸಿನಿಮಾದಲ್ಲಿ. ರಣವೀರ್ ಹಮ್ಜಾ ಅಲಿ ಮಜಾರಿ ಪಾತ್ರವನ್ನು ಸರಿಯಾಗಿ ನಿರ್ವಹಿಸಬಹುದು ಎಂಬ ನಂಬಿಕೆಯನ್ನು ಆದಿತ್ಯ ಧಾರ್ ಇಟ್ಟುಕೊಂಡಿದ್ದರು. ಅದೇ ರೀತಿಯಲ್ಲಿ ರಣವೀರ್ ಸಿಂಗ್ ಅವರು ಈ ನಂಬಿಕೆಯನ್ನು ಉಳಿಸಿಕೊಂಡರು. ಈಗ ಇಬ್ಬರೂ ಮತ್ತೊಮ್ಮೆ ಒಂದಾಗುತ್ತಿದ್ದಾರೆ.
ಆದಿತ್ಯ ಧಾರ್ ಅವರ ಮುಂದಿನ ಚಿತ್ರಕ್ಕೆ ಹೀರೋ ಯಾರು ಎಂಬ ಬಗ್ಗೆ ಚರ್ಚೆಗಳು ಈ ಮೊದಲಿನಿಂದಲೂ ನಡೆಯುತ್ತಲೇ ಇವೆ. ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ. ಕೆಲವರು ಅಲ್ಲು ಅರ್ಜುನ್ ಹೆಸರು ಹೇಳಿದರೆ, ಇನ್ನೂ ಕೆಲವರು ಬೇರೆ ನಟರ ಹೆಸರನ್ನು ಹೇಳಿದ್ದಾರೆ. ಆದರೆ, ಈಗ ಸಿದ್ಧಪಡಿಸಿಕೊಂಡಿರುವ ಕಥೆಯ ಒಂದೆಳೆಗೆ ರಣವೀರ್ ಸಿಂಗ್ ಅವರೇ ಹೆಚ್ಚು ಸೂಕ್ತ ಎಂದು ಆದಿತ್ಯ ಧಾರ್ ಅವರಿಗೆ ಅನಿಸುತ್ತಿದೆ.
ಆದಿತ್ಯ ಧಾರ್ ಅವರು ‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಸಾಗುತ್ತಿವೆ.ಈ ಸಿನಿಮಾಗೆ ರಣವೀರ್ ಹೀರೋ ಆದರೆ, ವಿಲನ್ ಯಾರು ಎಂಬುದು ಇನ್ನೂ ಫೈನಲ್ ಆಗಿಲ್ಲ ಎಂದು ವರದಿ ಆಗಿದೆ. ಈ ಸಿನಿಮಾ 2027ರಲ್ಲಿ ಸೆಟ್ಟೇರುವ ನಿರೀಕ್ಷೆ ಇದೆ.
ಇದನ್ನೂ ಓದಿ: ‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’
‘ಧುರಂಧರ್ 2’ ಸಿನಿಮಾ ಈಗಾಗಲೇ ‘ಬಾಹುಬಲಿ 2’ ಚಿತ್ರದ ದಾಖಲೆಯನ್ನು ಮುರಿದಿದೆ. ಈ ಸಿನಿಮಾ ಇಷ್ಟು ದಾಖಲೆ ಮಾಡಲು ಕಾರಣ ‘ಧುರಂಧರ್’ ಸಿನಿಮಾದ ಯಶಸ್ಸು. ಈಗ ಈ ಎರಡೂ ಚಿತ್ರದ ಯಶಸ್ಸು ಆದಿತ್ಯ ಧಾರ್ ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.