ಉಡುಪಿ, (ಜುಲೈ 05): ಜುಲೈ ಆರಂಭದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಇದರಿಂದ ಉಡುಪಿಯ ಪ್ರಸಿದ್ಧ ಫಾಲ್ಸ್ ತುಂಬಿ ಹರಿಯುತ್ತಿದೆ. ಹೌದು…ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಕೂಡ್ಲು ಫಾಲ್ಸ್ 150-ಅಡಿ ಕಲ್ಲಿನ ಬಂಡೆಯ ಕೆಳಗೆ ದುಮ್ಮಿಕ್ಕಿ ಹರಿಯುತ್ತಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ಫಾಲ್ಸ್ ಪ್ರವೇಶ ನಿಷೇಧಿಸಲಾಗಿದೆ. ಮಳೆಗಾಲದಲ್ಲಿ ಅತ್ಯಂತ ಮನಮೋಹಕವಾಗಿ ಕಾಣುವ ಫಾಲ್ಸ್ ಅಷ್ಟೇ ಅಪಾಯಕಾರಿಯಾಗಿದೆ. ಪ್ರವಾಸಿಗರು ಬಂದು ಯಾವುದೇ ಪ್ರಾಣಪಾಯಕ್ಕೆ ಒಳಗಾಗಬಹುದು ಎನ್ನುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಗೇಟ್ ಹಾಕಿ ಫಾಲ್ಸ್ ದಾರಿ ಬಂದ್ ಮಾಡಿದೆ.
