ನೆಲಮಂಗಲ, ಜುಲೈ 4: ಮನೆಯೊಳಗೆ ಪುಟ್ಟ ಮಕ್ಕಳು ಮಲಗಿದ್ದ ಚಾಪೆಯಲ್ಲೇ ಬೃಹತ್ ನಾಗರಹಾವೊಂದು ಅಡಗಿದ್ದ ಅತ್ಯಂತ ಆಘಾತಕಾರಿ ಮತ್ತು ಮೈ ಜುಂ ಎನ್ನಿಸುವ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಬಳಿಯ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಮಕ್ಕಳು ನಿರಾಳವಾಗಿ ಮಲಗಿದ್ದ ಚಾಪೆಯ ಕೆಳಗೆ ಬರೋಬ್ಬರಿ 5 ಅಡಿ ಉದ್ದದ ನಾಗರಹಾವು ಸೇರಿಕೊಂಡಿತ್ತು. ಇದನ್ನು ತಡವಾಗಿ ಗಮನಿಸಿದ ಪೋಷಕರು ಒಂದು ಕ್ಷಣ ತೀವ್ರ ಕಂಗಾಲಾಗಿದ್ದಾರೆ. ತಕ್ಷಣವೇ ವನ್ಯಜೀವಿ ಸಂರಕ್ಷಣಾ ಪ್ರತಿಷ್ಠಾನದ ಉರಗ ರಕ್ಷಕರಾದ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ಪ್ರಶಾಂತ್, ಅತ್ಯಂತ ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ಉರಗ ರಕ್ಷಕರ ಸಕಾಲಿಕ ಸ್ಪಂದನೆಯಿಂದಾಗಿ ಪುಟ್ಟ ಮಕ್ಕಳು ಜೀವಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹಾವನ್ನು ಹಿಡಿಯುವ ರೋಮಾಂಚನಕಾರಿ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.
ವಿಡಿಯೋ, ವರದಿ: ಮಂಜುನಾಥ್, ಟಿವಿ9, ನೆಲಮಂಗಲ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ