ತುಮಕೂರು, ಜುಲೈ 28: ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರಗಾಲ ಎದುರಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ. ತುಮಕೂರಿನ ಒಟ್ಟು 2,047 ಕೆರೆಗಳ ಪೈಕಿ 400 ದೊಡ್ಡ ಕೆರೆಗಳಲ್ಲಿ 300ಕ್ಕೂ ಹೆಚ್ಚು ಕೆರೆಗಳು ಸಂಪೂರ್ಣವಾಗಿ ಖಾಲಿಯಾಗಿವೆ. ಉಳಿದ 100 ಕೆರೆಗಳಲ್ಲೂ ನೀರು ಡೆಡ್ ಸ್ಟೋರೇಜ್ ಹಂತಕ್ಕೆ ತಲುಪಿರುವುದು ಆತಂಕ ಮೂಡಿಸಿದೆ. ಹೀಗಾಗಿ ಜನ, ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿಲ್ಲದೆ ತೀವ್ರ ಪರದಾಟ ಉಂಟಾಗಿದೆ. ರೈತರು ತಮ್ಮ ತೆಂಗು ಮತ್ತು ಅಡಿಕೆ ತೋಟಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಮಳ್ಳೂರು ಕೆರೆ, ಮರಳೂರು ದಿಣ್ಣೆ ಕೆರೆಯಂತಹ ಪ್ರಮುಖ ಜಲಮೂಲಗಳೂ ಬತ್ತಿ ಹೋಗಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
