ಬೆಳಗಾವಿ, ಆಗಸ್ಟ್ 04: ಜಿಲ್ಲೆಯ ಖಾನಾಪುರ ಮತ್ತು ಕಣಕುಂಬಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಿತ್ತೂರು ತಾಲೂಕಿನ ಇಟಗಿ ಗ್ರಾಮದ ಬಳಿ ಹರಿಯುವ ಮಲಪ್ರಭಾ ನದಿಗೆ ಸದ್ಯ 7000 ಕ್ಯೂಸೆಕ್ ನೀರು ಹರಿದುಬರುತ್ತಿದೆ. ನದಿಯ ತಟದಲ್ಲಿರುವ ಅಕ್ಕ ಗಂಗಾಂಬಿಕಾ ಐಕ್ಯ ಸ್ಥಳವು ಸಂಪೂರ್ಣವಾಗಿ ಮಲಪ್ರಭಾ ನದಿಯಿಂದ ಸುತ್ತುವರೆದಿದೆ. ಒಂದು ತಿಂಗಳ ಹಿಂದೆ ಸಂಪೂರ್ಣವಾಗಿ ಬತ್ತಿ ಹೋಗಿದ್ದ ನದಿಗೆ ಇದೀಗ ಜೀವಕಳೆ ಬಂದಿದೆ. ನದಿ ಪಾತ್ರದಲ್ಲಿರುವ ಕೆಳ ಹಂತದ ಸೇತುವೆಗಳು ಸಹ ಮುಳುಗುವ ಹಂತಕ್ಕೆ ತಲುಪಿವೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
