Headlines

ಮಹಾರಾಷ್ಟ್ರದಲ್ಲಿ ಮಳೆಯಬ್ಬರ: ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ

ಮಹಾರಾಷ್ಟ್ರದಲ್ಲಿ ಮಳೆಯಬ್ಬರ: ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ

ಚಿಕ್ಕೋಡಿ, ಜುಲೈ 24: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಕರ್ನಾಟಕದ ಗಡಿ ಪ್ರದೇಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಮಳೆಯಿಲ್ಲದಿದ್ದರೂ, ಮಹಾರಾಷ್ಟ್ರದ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.  ಕೃಷ್ಣಾ ನದಿಗೆ ಸುಮಾರು 90,000 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ದೂದಗಂಗಾ ಮತ್ತು ವೇದಗಂಗಾ ನದಿಗಳು ಕೂಡ ಮೈದುಂಬಿ ಹರಿಯುತ್ತಿವೆ. ಕಲ್ಲೋಳ ಬ್ಯಾರೇಜ್ ಬಳಿಯ ದತ್ತ ಮಂದಿರವೂ ಮುಳುಗಡೆಯಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆ ಕಂಡಿರುವುದರಿಂದ ಕೃಷಿ ಭೂಮಿ ಜಲಾವೃತವಾಗುವ ಭೀತಿ ರೈತರಲ್ಲಿ ಆತಂಕ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *