Headlines

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿ, ಉದ್ಧವ್ ಬಣದ ಸಂಸದರ ಫೋನ್ ಆಫ್, ದೆಹಲಿಯತ್ತ ಎಲ್ಲರ ಚಿತ್ತ – Kannada News | Maharashtra Politics Turmoil: Uddhav Shiv Sena MPs Switch Off Phones Amid Defection Rumors

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಪ್ರಕ್ಷುಬ್ಧತೆ ಉಂಟಾಗಿದೆ. ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನೆ ಪಕ್ಷದ ಕೆಲವು ಲೋಕಸಭಾ ಸಂಸದರ ಫೋನ್​ಗಳು ಇದ್ದಕ್ಕಿದ್ದಂತೆ ದ್ವಿಚ್ ಆಫ್ ಆಗಿದ್ದು, ಹಿರಿಯ ನಾಯಕರಿಗೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಆಂತರಿಕ ಭಿನ್ನಾಭಿಪ್ರಾಯದ ಬೆನ್ನಲ್ಲೇ ಎಲ್ಲರ ಚಿತ್ತ ಈಗ ಮುಂಬೈನಿಂದ ದೆಹಲಿಯತ್ತ ನೆಟ್ಟಿದೆ.

ಶಿಂಧೆ ಬಣದ ಜೊತೆ ವಿಲೀನಕ್ಕೆ ಸಿದ್ಧತೆ?
ಮೂಲಗಳ ಪ್ರಕಾರ, ಉದ್ಧವ್ ಬಣದ ಆರು ಸಂಸದರಾದ ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶಮುಖ್, ನಾಗೇಶ್ ಪಾಟೀಲ್ ಅಷ್ಟಿಕರ್, ಓಂರಾಜೆ ನಿಂಬಾಳ್ಕರ್, ಭೌಸಾಹೇಬ್ ವಾಕಚೌರೆ ಮತ್ತು ಸಂಜಯ್ ಜಾಧವ್ ಅವರು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಜತೆ ಸಂ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಮತ್ತೊಬ್ಬ ಸಂಸದ ರಾಜಭಾವು ವಾಜೆ ಕೂಡ ಇವರನ್ನು ಸೇರಿಕೊಳ್ಳಲಿದ್ದಾರೆ ಎಂಬ ವದಂತಿ ಇದೆ. ಈ ಭಿನ್ನಮತೀಯ ಸಂಸದರು ದೆಹಲಿಯಲ್ಲಿ ಶ್ರೀಕಾಂತ್ ಶಿಂಧೆ ನಿವಾಸದಲ್ಲಿ ಸಭೆ ನಡೆಸಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಬಣ ರಚಿಸುವ ಪ್ರಕ್ರಿಯೆ ಮುಗಿಸಿ, ನಂತರ ಶಿಂಧೆ ಶಿವಸೇನೆಯಲ್ಲಿ ವಿಲೀನಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ತಲಾ 15 ಕೋಟಿ ರೂ. ಆಮಿಷ: ಸಂಜಯ್ ರಾವತ್ ಗಂಭೀರ ಆರೋಪ
ಈ ಬೆಳವಣಿಗೆಗಳ ಬೆನ್ನಲ್ಲೇ ದೆಹಲಿಗೆ ಧಾವಿಸಿರುವ ಉದ್ಧವ್ ಬಣದ ಹಿರಿಯ ನಾಯಕ ಸಂಜಯ್ ರಾವತ್, ಆಡಳಿತ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಹಾರಾಷ್ಟ್ರದ ಸಂಸದರನ್ನು ಖರೀದಿಸಲು ತಲಾ 15 ಕೋಟಿ ರೂ. ಹಣ ನೀಡಲಾಗುತ್ತಿದೆ. ಈ ಮಾಹಿತಿ ಆಘಾತಕಾರಿ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಆದರೆ, ಪಕ್ಷ ಒಡೆಯುವ ವದಂತಿಗಳನ್ನು ತಳ್ಳಿಹಾಕಿರುವ ಅವರು, ಯಾವುದೇ ಸವಾಲನ್ನು ಎದುರಿಸಲು ತಮ್ಮ 60 ವರ್ಷಗಳ ಇತಿಹಾಸವಿರುವ ಸಂಘಟನೆ ಸಿದ್ಧವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು?

ಸಭೆಗೆ ಗೈರಾಗಿದ್ದೇ ಅನುಮಾನಕ್ಕೆ ಕಾರಣ
ಕಳೆದ ಭಾನುವಾರ ಉದ್ಧವ್ ಠಾಕ್ರೆ ಅವರು ಮುಂಬೈನಲ್ಲಿ ಕರೆದಿದ್ದ ಪ್ರಮುಖ ಸಭೆಗೆ ಒಟ್ಟು 9 ಲೋಕಸಭಾ ಸಂಸದರ ಪೈಕಿ ಕೇವಲ ನಾಲ್ವರು ಮಾತ್ರ ಖುದ್ದಾಗಿ ಹಾಜರಾಗಿದ್ದರು. ಉಳಿದ ಐವರು ಸಂಸದರು ವೈಯಕ್ತಿಕ ಕಾರಣ ನೀಡಿ ಕೇವಲ ಫೋನ್ ಅಥವಾ ಆನ್‌ಲೈನ್ ಮೂಲಕ ಭಾಗವಹಿಸಿದ್ದರು. ಅದರಲ್ಲಿಯೂ ಸಂಸದ ಸಂಜಯ್ ದೇಶಮುಖ್ ಅವರು ಉದ್ಧವ್ ಸಭೆಯನ್ನು ತಪ್ಪಿಸಿಕೊಂಡು, ದೆಹಲಿಯಲ್ಲಿ ಕೇಂದ್ರ ಸಚಿವ ಪ್ರತಾಪರಾವ್ ಜಾಧವ್ ಅವರನ್ನು ಭೇಟಿ ಮಾಡಿದ್ದು ಈ ಎಲ್ಲಾ ಅನುಮಾನಗಳಿಗೆ ಪ್ರಮುಖ ಕಾರಣವಾಗಿದೆ.

ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಈ ಬಗ್ಗೆ ಪ್ರತಿಕ್ರಿಯಿಸಿ, ಯಾವ ಜನಪ್ರತಿನಿಧಿಗಳಿಗೆ ಉದ್ಧವ್ ನಾಯಕತ್ವದ ಮೇಲೆ ನಂಬಿಕೆ ಇಲ್ಲವೋ ಮತ್ತು ಯಾರು ಬಾಳಾ ಸಾಹೇಬ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಅವರ ಆದರ್ಶಗಳನ್ನು ನಂಬುತ್ತಾರೋ, ಅಂತಹವರಿಗೆ ನಮ್ಮ ಶಿವಸೇನೆಯ ಬಾಗಿಲುಗಳು ಯಾವಾಗಲೂ ಮುಕ್ತವಾಗಿರುತ್ತವೆ ಎಂದು ಮುಕ್ತ ಆಹ್ವಾನ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *