Headlines

ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ; ರಾಜೀನಾಮೆ ನೀಡಲು ಸಿದ್ಧ ಎಂದ ಉದ್ಧವ್ ಠಾಕ್ರೆ – Kannada News | Uddhav Thackeray says Ready To Resign As UBT Shiv Sena Chief Maharashtra Politics

ಮುಂಬೈ, ಜೂನ್ 19: ಶಿವಸೇನೆಯ ಸಂಸ್ಥಾಪನಾ ದಿನದಂದು ಶಿವಸೇನೆ (Shiv Sena) ಠಾಕ್ರೆ ಬಣದಿಂದ ರ್ಯಾಲಿ ನಡೆಯಿತು. ಇದರಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಶಿವಸೇನೆ ಶಿಂಧೆ ಬಣ, ಬಿಜೆಪಿ ಮತ್ತು ಬಂಡಾಯ ಸಂಸದರ ಮೇಲೆ ದಾಳಿ ನಡೆಸಿದರು. ಈ ವೇಳೆ ಅವರು ತಮ್ಮ ಶಿವಸೇನೆ ಉದ್ಧವ್ ಠಾಕ್ರೆ ಬಣದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಘೋಷಿಸಿದರು. “ನಾನು ಹೇಗಿದ್ದೇನೆಂದು ನಿಮಗೆ ತಿಳಿದಿದೆ. ಒಬ್ಬ ವ್ಯಕ್ತಿ ನನ್ನತ್ತ ಬೆರಳು ಮಾಡಿ ತೋರಿಸಿದರೂ ನಾನು ಒಂದು ಕ್ಷಣವೂ ಕಚೇರಿಯಲ್ಲಿ ಉಳಿಯುವುದಿಲ್ಲ. ಅದಕ್ಕಾಗಿಯೇ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ನಾನು ಬಯಸಿದರೆ ವಿಧಾನಸಭೆಯಲ್ಲಿ ಕುಳಿತುಕೊಳ್ಳುತ್ತಿದ್ದೆ. 60 ವರ್ಷಗಳು ಕಳೆದಿವೆ. ನನ್ನ ವಿರುದ್ಧದ ಆರೋಪಗಳು ನಿಜವಾಗಿದ್ದರೆ, ನನಗೆ ಹೇಳಿ. ನಾನು ಈಗಲೇ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಶಿವಸೇನೆ ಪಕ್ಷದ ಪ್ರಮುಖ ನಾಯಕರು ಮತ್ತು ಸಂಸದರ ತುರ್ತು ಸಭೆ ನಡೆಸಿದ ಉದ್ಧವ್ ಠಾಕ್ರೆ, ಪಕ್ಷದಲ್ಲಿ ಉಂಟಾಗಿರುವ ಆಂತರಿಕ ಕಲಹದಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ ನಾಯಕತ್ವದ ಮೇಲೆ ಯಾರಿಗಾದರೂ ನಂಬಿಕೆ ಇಲ್ಲದಿದ್ದರೆ ನಾನು ಈಗಲೇ ಶಿವಸೇನಾ (UBT) ಮುಖ್ಯಸ್ಥ ಸ್ಥಾನವನ್ನು ತ್ಯಜಿಸಲು ಸಿದ್ಧನಿದ್ದೇನೆ. ಅಧಿಕಾರಕ್ಕಾಗಿ ನಾನು ಎಂದಿಗೂ ಹಪಹಪಿಸಿಲ್ಲ. ನನ್ನ ತಂದೆ ಬಾಳಾಸಾಹೇಬ್ ಠಾಕ್ರೆ ಅವರ ತತ್ವಗಳಿಗಾಗಿ ನಾನು ಹೋರಾಡುತ್ತಿದ್ದೇನೆ” ಎಂದು ಸಭೆಯಲ್ಲಿ ಭಾವುಕರಾಗಿ ನುಡಿದಿದ್ದಾರೆ.

ಇದನ್ನೂ ಓದಿ: ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

ಪಕ್ಷಾಂತರ ಮಾಡಲು ಸಂಚು ರೂಪಿಸುತ್ತಿರುವ ಹಾಗೂ ವಿರೋಧಿ ಪಾಳಯದೊಂದಿಗೆ ಕೈಜೋಡಿಸಿರುವ ಬಂಡಾಯ ಸಂಸದರ ವಿರುದ್ಧ ಉದ್ಧವ್ ಠಾಕ್ರೆ ಕಟು ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. “ನಮ್ಮ ಚಿಹ್ನೆ ಮತ್ತು ನಮ್ಮ ಪಕ್ಷದ ಟಿಕೆಟ್‌ನಿಂದ ಗೆದ್ದು ಸಂಸತ್ ಪ್ರವೇಶಿಸಿದವರು ಈಗ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಇವರು ಕೇವಲ ಪಕ್ಷದ್ರೋಹಿಗಳಲ್ಲ, ಇಡೀ ಮಹಾರಾಷ್ಟ್ರದ ಜನತೆಗೆ ದ್ರೋಹ ಬಗೆದಿರುವ ದೇಶದ್ರೋಹಿಗಳು” ಎಂದು ಗುಡುಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಏಕನಾಥ್ ಶಿಂದೆ ಅವರ ನೇತೃತ್ವದಲ್ಲಿ ಶಿವಸೇನೆಯಲ್ಲಿ ಭಾರಿ ಬಿರುಕು ಉಂಟಾಗಿತ್ತು. ಈಗ ಮತ್ತೊಮ್ಮೆ ಉದ್ಧವ್ ಠಾಕ್ರೆ ಬಣದ ಕೆಲವು ಸಂಸದರು ಮತ್ತು ಹಿರಿಯ ನಾಯಕರು ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಗುಂಪು ರಚಿಸಲು ಅಥವಾ ಮೈತ್ರಿ ಬದಲಾಯಿಸಲು ಸಿದ್ಧತೆ ನಡೆಸಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಜೊತೆ ವಿಲೀನಕ್ಕೆ ಉದ್ಧವ್ ಠಾಕ್ರೆ ಪ್ಲಾನ್; ಶಿವಸೇನೆಯ 6 ಬಂಡಾಯ ಸಂಸದರಿಂದ ಸ್ಪೀಕರ್‌ಗೆ ದೂರು

ಉದ್ಧವ್ ಠಾಕ್ರೆ ಅವರ ಈ ರಾಜೀನಾಮೆಯ ಪ್ರಸ್ತಾಪ ಬಂಡಾಯಗಾರರನ್ನು ಹಿಡಿದಿಡಲು ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಒಟ್ಟುಗೂಡಿಸಲು ಕೈಗೊಂಡಿರುವ ರಾಜತಾಂತ್ರಿಕ ನಡೆ ಎಂದೂ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *