
ಚಾಮರಾಜನಗರ, ಏಪ್ರಿಲ್ 7: ಚಾಮರಾಜನಗರ ಜಿಲ್ಲೆಯ ಬೂದಿತಿಟ್ಟು ಗ್ರಾಮದ ಬಿಳಿಗಿರಿ ಎಂಬುವವರ ಮನೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮನೆಯ ಹೊರಾಂಗಣದಲ್ಲಿದ್ದ ವಾಷಿಂಗ್ ಮಿಷನ್ನಲ್ಲಿ ಬಟ್ಟೆ ಒಗೆಯ ಹಾಕಲು ಹೋದ ಮಹಿಳೆಗೆ ಮಿಷನ್ ಒಳಗಿದ್ದ ಹಾವನ್ನು ನೋಡಿ ಶಾಕ್ ಆಗಿದೆ. ಬಿಸಿಲಿನ ಬೇಗೆಯಿಂದ ತಂಪಾದ ಜಾಗ ಅರಸಿ ಬಂದಿದ್ದ ನೀರುಹಾವು ಇದಾಗಿದ್ದು, ಉರಗ ತಜ್ಞ ಸ್ನೇಕ್ ಚಾಂಪು ಅವರು ಅದನ್ನು ರಕ್ಷಿಸಿದ್ದಾರೆ. ಬೇಸಿಗೆಯಲ್ಲಿ ಹಾವುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.