ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯನೋ ಅದಕ್ಕಿಂತ ಹೆಚ್ಚಿನ ಮಹತ್ವ ಮಾನಸಿಕ ಆರೋಗ್ಯಕ್ಕೆ ಇದೆ. ಹೌದು…ಇಂದಿನ ಲೈಫ್ ಸ್ಟೈಲ್, ಆಫೀಸ್ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಸಂಕಷ್ಟಗಳು ಮತ್ತು ಸಾಮಾಜಿಕ ಒತ್ತಡ ಹೀಗೆ ಹಲವು ಆತಂಕ, ಖಿನ್ನತೆ ಮತ್ತು ನಿರಾಸೆಯಂತಹ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇನ್ನು ತಪ್ಪು ಕಲ್ಪನೆಗಳಿಂದ ತಮ್ಮ ಸಮಸ್ಯೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳಲು ಹೆದರುತ್ತಾರೆ. ಹೀಗಾಗಿ ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡಲು ಕಿರಣ್ ಇದ್ದಾನೆ. ಏನಿದು ಕಿರಣ್ ಸಹಾಯವಾಣಿ? ಹೇಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಮುಕ್ತಿ ಪಡೆದುಕೊಳ್ಳಬಹುದು ಎನ್ನುವ ವಿವರ ಇಲ್ಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
