Headlines

ಮಾವು ಬೆಳೆಗಾರರ ಸಂಕಷ್ಟಕ್ಕೆ ಕೆಂದ್ರದಿಂದ ಸ್ಪಂದನೆ: ತೋತಾಪುರಿ ಮಾವಿಗೆ ಸಹಾಯಧನ ಘೋಷಣೆ – Kannada News | Central Government Approves 1,750 Per Quintal Subsidy for 1.30 Lakh Metric Tonnes of Totapuri Mangoes in Karnataka

ಬೆಂಗಳೂರು, ಜೂನ್​​ 25: ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಮಿಡಿದಿದ್ದು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ 1,750 ರೂಪಾಯಿ ಸಹಾಯಧನವನ್ನು ರೈತರಿಗೆ ನೀಡಲು ಅನುಮೋದನೆ ನೀಡಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಎಕ್ಸ್​​ ಪೋಸ್ಟ್​​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಹ್ಲಾದ್​​ ಜೋಶಿ ಪೋಸ್ಟ್​​ನಲ್ಲಿ ಏನಿದೆ?

ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PDPS) ಅಡಿಯಲ್ಲಿ ಬೆಂಬಲ ನೀಡುವಂತೆ ತಾನು ಮನವಿ ಮಾಡಿದ್ದೆ. ಆ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ ರೈತರಿಗೆ ಸಹಾಯಧನವನ್ನು ನೀಡಲು ಅನುಮೋದನೆ ನೀಡಿರೋದಾಗಿ ಪ್ರಹ್ಲಾದ್​​ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ:  ಕೋಲಾರದಲ್ಲಿ ವಾಹನಗಳನ್ನು ತಡೆದು, ರಸ್ತೆ ಬಂದ್​ ಮಾಡಿ ಮಾವು ಬೆಳೆಗಾರರ ಪ್ರತಿಭಟನೆ!

ಕೃಷಿ ಸಚಿವರಿಗೆ ಜೋಶಿ ಧನ್ಯವಾದ

ಇನ್ನು ರಾಜ್ಯದ ಮಾವು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಕೃಷಿ ಸಚಿವರಿಗೆ ಹೃತ್ಪೂರ್ವಕ ಧನ್ಯವಾದವನ್ನೂ ಪ್ರಹ್ಲಾದ್​​ ಜೋಶಿ ತಿಳಿಸಿದ್ದಾರೆ. ಈ ನಿರ್ಧಾರವು ಸಾವಿರಾರು ರೈತ ಕುಟುಂಬಗಳಿಗೆ ನೆರವಾಗಲಿದ್ದು, ಅವರ ಆರ್ಥಿಕ ಸ್ಥಿರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ್​​ ಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಧನ್ಯವಾದಗಳನ್ನು ಪ್ರಹ್ಲಾದ್​​ ಜೋಶಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:12 pm, Thu, 25 June 26

Source link

Leave a Reply

Your email address will not be published. Required fields are marked *