ಸಾಮಾನ್ಯವಾಗಿ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ರೈತರಿಗೆ ಲಾಭ ಸಿಗುತ್ತಿರಲಿಲ್ಲ. ಈಗ ಧಾರವಾಡದ ಮಾವು ಬೆಳೆಗಾರರ ಬಳಗವು ನೇರವಾಗಿ ಗ್ರಾಹಕರಿಗೆ ಹಣ್ಣು ತಲುಪಿಸುವ ಮೂಲಕ ಈ ಮಧ್ಯವರ್ತಿಗಳ ವ್ಯವಸ್ಥೆಯನ್ನು ತಪ್ಪಿಸಿದೆ. ಇದರಿಂದ ಲಾಭಾಂಶವು ನೇರವಾಗಿ ರೈತರ ಕೈ ಸೇರುತ್ತಿದೆ.
