ಚಾಮರಾಜನಗರ, ಜುಲೈ 26: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಕಾರಣ, ಚಾಮರಾಜನಗರ ಜಿಲ್ಲೆಯ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಬಣಗುಡುತ್ತಿದೆ. ಕೊಳ್ಳೇಗಾಲ ತಾಲೂಕಿನಲ್ಲಿರುವ ಈ ಜಲಪಾತವು ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ಜಲಪಾತದ ಬಂಡೆಗಳು ಮಾತ್ರ ಕಾಣುತ್ತಿದೆ. ಮಳೆಗಾಲ ಆರಂಭವಾದರೂ ಕಾವೇರಿ ಕೊಳ್ಳ ಮತ್ತು ಹಳೆ ಮೈಸೂರು ಭಾಗದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಪರಿಣಾಮ ಕಾವೇರಿ ನದಿ ಹಾಗೂ ಕೆ.ಆರ್.ಎಸ್. ಡ್ಯಾಂ ಸಹ ಭರ್ತಿಯಾಗಿಲ್ಲ. ಇದರಿಂದ ಭರಚುಕ್ಕಿ ಜಲಪಾತಕ್ಕೆ ನೀರಿನ ಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಮಳೆ ಕೊರತೆ ಭರಚುಕ್ಕಿಯ ಸೌಂದರ್ಯಕ್ಕೆ ಧಕ್ಕೆ ತಂದಿದ್ದು, ಪ್ರವಾಸೋದ್ಯಮಕ್ಕೂ ಹೊಡೆತ ನೀಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
