ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಮುಂಬೈ, ಮಾರ್ಚ್​ 12: ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸೇರಿದಂತೆ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿವೆ. ಇಂದು(ಮಾರ್ಚ್​​12) ಬೆಳಗ್ಗೆ ಬಿಎಸ್‌ಇ, ವಿಧಾನ ಭವನ ಮತ್ತು ಬಾಂಬೆ ಹೈಕೋರ್ಟ್‌ಗೆ ಬೆದರಿಕೆ ಇ-ಮೇಲ್‌ಗಳು ಬಂದಿವೆ. ಎಲ್ಲಾ ಸ್ಥಳಗಳಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಅಳವಡಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಆಯಾ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ವಿಧಾನ ಭವನದಲ್ಲಿ ಬಾಂಬ್ ಸ್ಫೋಟ ಸಂಭವಿಸುವ ಬಗ್ಗೆ ಅಧಿಕಾರಿಗಳಿಗೆ ಮುಂಜಾನೆ ಬಂದ ಆತಂಕಕಾರಿ ಇ-ಮೇಲ್ ಬಂದಿತ್ತು. ಬಜೆಟ್ ಅಧಿವೇಶನ ಕೂಡ ನಡೆಯುತ್ತಿದೆ. ಮಹಾರಾಷ್ಟ್ರ ವಿಧಾನ ಭವನದ ಬಳಿ ನಡೆದ ಆತ್ಮಹತ್ಯೆ ಪ್ರಯತ್ನವನ್ನು ಪೊಲೀಸರ ಮಧ್ಯಪ್ರವೇಶದಿಂದ ವಿಫಲಗೊಳಿಸಿದ ಕೇವಲ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಬುಧವಾರ, ಸೋಲಾಪುರ ಜಿಲ್ಲೆಯ ಮಾಧಾ ತಾಲೂಕಿನ ತಕ್ಲಿ ಗ್ರಾಮದ ನಿವಾಸಿ 38 ವರ್ಷದ ದಾದಾಸೊ ಬಬನ್ ಕಲ್ಸೈತ್ ಎಂಬ ವ್ಯಕ್ತಿ ಉಷಾ ಮೆಹ್ತಾ ಚೌಕ್ ಬಳಿ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದರು.

ಸಿಬ್ಬಂದಿ ಇಂಧನಕ್ಕೆ ಬೆಂಕಿ ಹಚ್ಚುವ ಮೊದಲೇ ಆತನನ್ನು ತಡೆದಿದ್ದರು. ನಂತರ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಮೆರೈನ್ ಡ್ರೈವ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.
ಪೊಲೀಸರು ಕಲ್ಸೈತ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 226 ರ ಅಡಿಯಲ್ಲಿ ಗುರುತಿಸಲಾಗದ ಅಪರಾಧವನ್ನು ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಬಾಂಬ್ ಬೆದರಿಕೆ ಇ-ಮೇಲ್ ನಂತರ ಅಧಿಕಾರಿಗಳು ವಿಧಾನ ಭವನದಲ್ಲಿ ಭದ್ರತಾ ತಪಾಸಣೆಗಳನ್ನು ಮುಂದುವರೆಸಿದ್ದಾರೆ, ಆದರೂ ಸಂದೇಶದ ಮೂಲದ ಬಗ್ಗೆ ಅಧಿಕಾರಿಗಳು ಇನ್ನೂ ಹೆಚ್ಚಿನ ವಿವರಗಳನ್ನು ತಿಳಿಸಿಲ್ಲ.ಇಲ್ಲಿಯವರೆಗೆ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *