
ಮಂಡ್ಯ, ಜೂನ್ 25: ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಜಲಕ್ರೀಡೆಗೆ ಇಳಿದಿದ್ದ ನಾಲ್ವರು ಮಹಿಳೆಯರು ಮತ್ತು ಅವರನ್ನು ರಕ್ಷಿಸಲು ಯತ್ನಿಸಿದ ಕಾರು ಚಾಲಕ ಸೇರಿದಂತೆ ಐವರು ಜಲಸಮಾಧಿಯಾಗಿರುವ ಘಟನೆ ನಿನ್ನೆ ನಡೆದಿತ್ತು. ಸಾವಿಗೂ ಮುನ್ನ ಸಂತಸದಿಂದ ನೀರಿಗೆ ಇಳಿದಿದ್ದವರ ಕೊನೆಯ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದೇವಸ್ಥಾನಕ್ಕೆ ತೆರಳಿದ್ದ ನಾಲ್ವರು ಮಹಿಳೆಯರು ನೀರಿಗೆ ಇಳಿದಿದ್ದು, ಆರಂಭದಲ್ಲಿ ನೀರು ಮೊಣಕಾಲು ಮಟ್ಟಕ್ಕೆ ಮಾತ್ರ ಇತ್ತು. ನೀರಿನಲ್ಲಿ ಆಟವಾಡುವಾಗ ಅವರಲ್ಲಿ ಒಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಉಳಿದ ಮೂವರು ಮಹಿಳೆಯರು ಮತ್ತು ನಂತರ ಕಾರು ಚಾಲಕ ಮಹೇಶ್ ಪ್ರಯತ್ನಿಸಿದ್ದು, ಎಲ್ಲರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.