Headlines

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೆಯುತ್ತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ – Kannada News | Muslim Leaders Warn of Protest Against BJP MLC C.T. Ravi Over ‘Mulla’ Remark in Chikkamagaluru

ಚಿಕ್ಕಮಗಳೂರು, ಜುಲೈ 28: ‘ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ’ ಎಂಬ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಹೇಳಿಕೆಯನ್ನು ಮುಸ್ಲಿಂ ನಾಯಕರು ಖಂಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಸ್.ಡಿ.ಪಿ.ಐ. ಮುಖಂಡ ಅತೀಕ್ ಮಾತನಾಡಿ, ಮುಸಲ್ಮಾನರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಸಿಟಿ ರವಿಗೆ ಆಗ್ರಹಿಸಿದ್ದಾರೆ. ಮುಲ್ಲಾಗಳು ಯಾರೂ ಅನಕ್ಷರಸ್ಥರಲ್ಲ ಎಂದು ಸ್ಪಷ್ಟಪಡಿಸಿದ ಅತೀಕ್, ಪ್ರತಿಯೊಬ್ಬರೂ ಶಿಕ್ಷಿತರು ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿದ್ದಾರೆ ಎಂದು ಹೇಳಿದರು. ದೇಶದ ಅಭಿವೃದ್ಧಿಗೆ ಮುಸ್ಲಿಂ ಸಮುದಾಯದ ಕೊಡುಗೆಯನ್ನು ಉಲ್ಲೇಖಿಸಿದ ಅವರು, ಬಿಳಿ ಕೂದಲಿನ ರಾಜಕೀಯ ಈಗ ನಡೆಯುವುದಿಲ್ಲ ಎಂದು ತಿಳಿಸಿದರು.

ಮುಂದೆ ಯಾವುದೇ ಭಾಷಣ ಮಾಡುವ ಮುನ್ನ ಯೋಚಿಸಿ ಮಾತನಾಡಬೇಕು. ಇಂತಹ ಮಾತು ಮುಂದುವರಿದರೆ, ಮುಸ್ಲಿಂ ಸಮುದಾಯ ಒಟ್ಟಾಗಿ ಸಿ.ಟಿ. ರವಿ ಅವರು ಚಿಕ್ಕಮಗಳೂರಿಗೆ ಪ್ರವೇಶಿಸದಂತೆ ತಡೆಯಲಿದೆ ಎಂದು ಅತೀಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ನೇರ ಚರ್ಚೆಗೆ ಬರುವಂತೆ ಸಿ.ಟಿ. ರವಿಗೆ ಸವಾಲು ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *