ಬೆಂಗಳೂರು, ಜೂನ್ 22: ಮುಸ್ಲಿಂ ಧರ್ಮಗುರುಗಳು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮುದಾಯಕ್ಕೆ ಮಂತ್ರಿ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. 14 ಜಿಲ್ಲೆಗಳಿಂದ ಆಗಮಿಸಿರುವ ಉಲೇಮಾಗಳು ಸಂಪುಟ ವಿಸ್ತರಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದು, ಮೂರು ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಪ್ರಮುಖವಾಗಿ ಸಲೀಂ ಅಹ್ಮದ್ಗೆ ಸಚಿವ ಸ್ಥಾನಕ್ಕೆ ಬೇಡಿಕೆ ಇಡಲಾಗಿದ್ದು, ಕಳೆದ ೪೦ ವರ್ಷಗಳಿಂದ ಪಕ್ಷದಲ್ಲಿರುವ ಅವರು ಜನಾನುರಾಗಿಯಾದವರು. ಹೀಗಾಗಿ ಅವರಿಗೆ ಒಂದು ಅವಕಾಶ ನೀಡಿ ಎಂದು ಕಾಂಗ್ರೆಸ್ ನಾಯಕರನ್ನು ವಿನಂತಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.