ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ. – Kannada News | Karnataka Cabinet Decisions: Rs 600 Cr for Minority Colony Development, Bidadi Township Approved

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್​ಕೆ ಪಾಟೀಲ್Image Credit source: tv9

ಬೆಂಗಳೂರು, ಮೇ 1: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದಿಂದ ಮುಸ್ಲಿಂ (Muslims) ಸಮುದಾಯ ಕಾಂಗ್ರೆಸ್ (Congress) ವಿರುದ್ಧ ತೀವ್ರ ಅಸಮಾಧಾನ ಹೊಂದಿತ್ತು. ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಮುಂದಾಗಿರುವ ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಕಾನೂನು ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

1 ರಿಂದ 12ನೇ ತರಗತಿಯವರೆಗೆ ಓದುತ್ತಿರುವ ಕಾರ್ಮಿಕರ ಮಕ್ಕಳಿಗೆ 115.84 ಕೋಟಿ ರೂ. ವೆಚ್ಚದಲ್ಲಿ 8,600 ಮೌಲ್ಯದ ಲೇಖನ ಸಾಮಗ್ರಿ, ಪುಸ್ತಕಗಳನ್ನೊಳಗೊಂಡ ಶಾಲಾ ಕಿಟ್ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಲು ಉಚಿತ ರೋಗ ಪತ್ತೆಗಾಗಿ 6 ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಖರೀದಿಸಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ರೈತರ ವಿರೋಧದ ನಡುವೆ ಬಿಡದಿ ಟೌನ್​​ಶಿಪ್​​ಗೆ ಅನುಮೋದನೆ

ಬಹು ದಿನಗಳಿಂದ ಬಾಕಿ ಇದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ ಮರುಜೀವ ನೀಡಲಾಗಿದೆ. ಸುಮಾರು 7,481 ಎಕರೆ ಪ್ರದೇಶದಲ್ಲಿ ಈ ಯೋಜನೆ ನಿರ್ಮಾಣವಾಗಲಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದಲೇ ಈ ಬೃಹತ್ ಉಪನಗರ ತಲೆ ಎತ್ತಲಿದೆ. ಈ ಹಿಂದೆ ರೈತರ ವಿರೋಧದಿಂದ ವಿಳಂಬವಾಗಿದ್ದ ಯೋಜನೆಗೆ ಈಗ ಹೊಸ ರೂಪ ನೀಡಲಾಗಿದ್ದು, ಭೂಮಿ ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆಗೆ 9600 ಚದರ ಅಡಿ ಅಭಿವೃದ್ಧಿಪಡಿಸಿದ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ.

  • ಆರೋಗ್ಯ ಮತ್ತು ಮೂಲಸೌಕರ್ಯ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರೋಗ ಪತ್ತೆಗಾಗಿ 6 ಹೊಸ ಎಂಆರ್‌ಐ (MRI) ಸ್ಕ್ಯಾನಿಂಗ್ ಯಂತ್ರಗಳನ್ನು ಖರೀದಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
  • ಕಲಬುರ್ಗಿ-ಬೆಂಗಳೂರು ಹಾಗೂ ಬೀದರ್-ಬೆಂಗಳೂರು ವಿಮಾನಯಾನ ಸೇವೆಗಳ ನಿರ್ವಹಣೆಗಾಗಿ ವರ್ಷಕ್ಕೆ ₹28.7 ಕೋಟಿ ಪ್ರೋತ್ಸಾಹಧನ ನೀಡಲು ಅನುಮೋದನೆ.
  • ವಾಯವ್ಯ ಸಾರಿಗೆ ಸಂಸ್ಥೆಗೆ 80 ಹೊಸ ಬಸ್‌ಗಳ ಖರೀದಿಗಾಗಿ ₹32 ಕೋಟಿ ಬಿಡುಗಡೆ.
    ಬೆಂಗಳೂರು-ಹೈದ್ರಾಬಾದ್ ಹೈಸ್ಪೀಡ್ ರೈಲು ಯೋಜನೆಯಡಿ ಕರ್ನಾಟಕದಲ್ಲಿ ಬರಲಿರುವ 15 ನಿಲ್ದಾಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
  • ರೈತರಿಂದ ಬಿಳಿಜೋಳ ಖರೀದಿಸಲು ಅಗತ್ಯವಿರುವ ಹೆಚ್ಚುವರಿ ಗೋಣಿ ಚೀಲಗಳ ಖರೀದಿಗಾಗಿ ₹21.35 ಕೋಟಿ ವೆಚ್ಚ ಮಾಡಲು ಒಪ್ಪಿಗೆ ನೀಡಲಾಗಿದೆ.
  • ತಿರುಮಲ ಕರ್ನಾಟಕ ರಾಜ್ಯ ಛತ್ರ: ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ರಾಜ್ಯ ಛತ್ರದ ನಿರ್ವಹಣೆಯನ್ನು
  • ಕಂದಾಯ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ (KSTDC) ವರ್ಗಾಯಿಸಲು ನಿರ್ಧರಿಸಲಾಗಿದೆ.
  • ಶಿಕ್ಷಣ ನೀತಿ: ರಾಜ್ಯ ಶಿಕ್ಷಣ ನೀತಿ ಆಯೋಗ ನೀಡಿರುವ ಅಂತಿಮ ವರದಿಯ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದರೂ, ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳದೆ ಮುಂದಿನ ಸಭೆಗೆ ಮುಂದೂಡಲಾಗಿದೆ.

ಸಚಿವ ಸಂಪುಟ ಸಭೆಯ ವಿವರವಾದ ಮಾಹಿತಿಗೆ ಓದಿ: ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *