ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.

ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ

ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಬಲರಾಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದರೂ, ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದರು.

ಇದನ್ನೂ ಓದಿ ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ

ಈ ಸಂದರ್ಭದಲ್ಲಿ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದರು. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ತಡರಾತ್ರಿ ವೈದ್ಯರು ಅಂಗಾಂಗಗಳನ್ನು ಪಡೆದುಕೊಂಡಿದ್ದು, ಒಂದು ಕಿಡ್ನಿಯನ್ನು ಝಿರೋ ಟ್ರಾಫಿಕ್​​ನಲ್ಲಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತೊಂದು ಕಿಡ್ನಿಯನ್ನು ಬಿಎಲ್ಡಿಇ ಆಸ್ಪತ್ರೆಯಲ್ಲಿರುವ ರೋಗಿಗೆ ಅಳವಡಿಸಲಾಗಿದೆ. ಇತರೆ ಅಂಗಾಂಗಗಳು ಹೊಂದಿಕೆಯಾಗದ ಕಾರಣ ಪಡೆದುಕೊಳ್ಳಲಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *