Headlines

ಮೇಕೆದಾಟು ಯೋಜನೆಗೆ ಅಡ್ಡಗಾಲು: ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ – Kannada News | Mekedatu Row: JD(S) Slams Congress for Aligning with Anti Project DMK

ಬೆಂಗಳೂರು, ಏಪ್ರಿಲ್​​ 21: ಮೇಕೆದಾಟು ಯೋಜನೆ ತಡೆಯುವ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಹೀಗಿದ್ದರೂ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್​​ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಎಲ್ಲಾ ಮಂತ್ರಿಗಳು ತಮಿಳುನಾಡಿಗೆ ಹೋಗಿ, ವಾರಗಟ್ಟಲೆ ಠಿಕಾಣಿ ಹೂಡಿ ಡಿಎಂಕೆ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಹೀಗಾಗಿ “ನಮ್ಮ ನೀರು ನಮ್ಮ ಹಕ್ಕು” ಎಂದು ಹೋರಾಟದ ಬೃಹತ್ ನಾಟಕವಾಡಿದ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್​​ ಕಿಡಿ ಕಾರಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *