ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ – Kannada News | Mekedatu Project: Union Minister HD Kumaraswamy Expresses Displeasure Over Tamil Nadu’s Objections

ಮಂಡ್ಯ, ಜೂನ್​​ 21: ಮೇಕೆದಾಟು ಯೋಜನೆಗೆ ತಮಿಳುನಾಡು ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಕುಡಿಯುವ ನೀರಿಗಾಗಿ ಮಾಡಲಾಗುತ್ತಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸಹಮತ ಕೊಡಬೇಕು‌.ರಾಜಕೀಯ, ಪ್ರತಿಷ್ಠೆಗಾಗಿ ಅಲ್ಲಿನ ಪಕ್ಷಗಳು ದಬ್ಬಾಳಿಕೆ ಮಾಡಬಾರದು. ಈ ಕ್ಯಾತೆ 50 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಉತ್ತಮ ಮಳೆಯಾದಾಗ ಕರ್ನಾಟಕವು ನ್ಯಾಯಮಂಡಳಿ ಆದೇಶಕ್ಕಿಂತಲೂ ಎರಡು ಪಟ್ಟು ಹೆಚ್ಚು ನೀರನ್ನು ಬಿಡುಗಡೆ ಮಾಡಿದೆ. ಆದರೆ ನಮ್ಮಲ್ಲಿಯೇ ಜಲಾಶಯಗಳು ಭರ್ತಿಯಾಗದಿದ್ದಾಗಲೂ ನೀರಿಗಾಗಿ ಒತ್ತಾಯಿಸುವುದು ಸೂಕ್ತವಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *