ಮೈಸೂರು, ಆಗಸ್ಟ್ 11: ಇತ್ತೀಚೆಗೆ ರಚನೆಯಾದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಥಾನ ವಂಚಿತರಾದ ಕಾಂಗ್ರೆಸ್ನ ಮೂವರು ಹಿರಿಯ ಶಾಸಕರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ ಛಿದ್ರವಾಯ್ತಾ? ಎಂಬ ಪ್ರಶ್ನೆಯೂ ಈ ಬೆಳವಣಿಗೆ ಬೆನ್ನಲ್ಲೇ ಉದ್ಭವಿಸಿದೆ. ಸಿದ್ದರಾಮಯ್ಯ ಪರಮಾಪ್ತರಾಗಿರುವ ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್ ಸೇಠ್ ಸಭೆ ನಡೆಸಿರೋದು ತೀವ್ರ ಕುತೂಹಲ ಮೂಡಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
