ಕೋಲಾರ, ಮೇ 27: ತಾಲೂಕಿನ ಕಳ್ಳಿಪುರ ಗ್ರಾಮದ ರೈತ ಬಸವರಾಜ್ ಎಂಬುವರ ಕುಟುಂಬವು ತಮ್ಮ ಮನೆಯ ‘ಗೌರಿ’ ಎಂಬ ಹಸು ಗರ್ಭಧರಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿಯ ಹಸುವಿಗೆ ಸುಂದರವಾದ ಮೊಗ್ಗಿನ ಜಡೆ ಹಾಕಿ, ಬಗೆಬಗೆಯ ತಿಂಡಿ-ತಿನಿಸುಗಳನ್ನು ನೀಡಿ ಸತ್ಕರಿಸಲಾಯಿತು. ಈ ವಿಶೇಷ ಆಚರಣೆಗೆ ಗ್ರಾಮದ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ಹಸುವಿಗೆ ಆರತಿ ಬೆಳಗಿ, ಬಂದ ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಅರಿಶಿನ-ಕುಂಕುಮ ಹಾಗೂ ತಾಂಬೂಲ ನೀಡಿ ಸೀಮಂತವನ್ನು ಸಂಭ್ರಮಿಸಲಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
