ಚಿತ್ರದುರ್ಗ, ಆಗಸ್ಟ್ 16: ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಲಿ ಎಂದು ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಭವನ ಸ್ಥಳ ಪರಿಶೀಲನೆ ವೇಳೆ ಅವರು ನೀಡಿದ್ದ ಹೇಳಿಕೆ ವೈರಲ್ ಆಗಿದ್ದು, ಆಂಧ್ರಪ್ರದೇಶಕ್ಕೆ ಸೇರಿಸಲಾಗದಿದ್ದರೆ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರಿಸಲಿ ಎಂದವರು ಆಗ್ರಹಿಸಿದ್ದಾರೆ. ಮೊಳಕಾಲ್ಮೂರು ಯಾವುದೋ ಒಂದು ಮೂಲೆಯಲ್ಲಿದ್ದು, ದೊಡ್ಡ ದೊಡ್ಡವರಿಗೆ ಕ್ಷೇತ್ರ ಇರುವುದೇ ಕಾಣುವುದಿಲ್ಲ. ಇಲ್ಲಿನ ಶಾಸಕರಿಗೆ ಗೌರವವೇ ಇರೋದಿಲ್ಲ. ಮೊಳಕಾಲ್ಮೂರು ಹಣೆಬರಹ ಎಲ್ಲಿತ್ತೋ ಅಲ್ಲೇ ಇದೆ ಎಂದವರು ಬೇಸರವನ್ನೂ ಹೊರಹಾಕಿದ್ದಾರೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡೋಣ. ನೂತನ ಸಚಿವರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿರುವೆ ಎಂದವರು ಹೇಳಿರುವ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
